10ರಂದು ರೈತರಿಂದ ಬೆಳಗಾವಿ ಚಲೋ: ಶಂಕರಗೌಡ ಜಯನಗೌಡ್ರ

KannadaprabhaNewsNetwork |  
Published : Dec 07, 2025, 03:15 AM IST
ರೈತ ಮುಖಂಡ ಶಂಕರಗೌಡ ಜಾಯನಗೌಡ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.  | Kannada Prabha

ಸಾರಾಂಶ

ಡಾ. ಎಂ.ಎಸ್. ಸ್ವಾಮಿನಾಥ್, ಎಂಎಸ್‌ಪಿ ಈ ಸಿ 50 ಸೂತ್ರವನ್ನು ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ವರದಿ ಸಲ್ಲಿಸಿ 26 ವರ್ಷವಾಗಿದೆ. ಆದರೂ ಯಾವುದೇ ತೀರ್ಮಾನ ಮಾಡದೆ ಇರುವುದರಿಂದ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ.

ಗದಗ: ರೈತರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದು ಸೇರಿದಂತೆ ಹಲವಾರು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ವತಿಯಿಂದ ಡಿ. 10ರಂದು ಬೆಳಗಾವಿ ಚಲೋ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಶಂಕರಗೌಡ ಜಯನಗೌಡ್ರ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾವೇರಿಯ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಂಡು 24 ಟಿಎಂಸಿ ನೀರನ್ನು ಉಳಿತಾಯ ಮಾಡಿ ರಾಜ್ಯದ ಅಭಿವೃದ್ಧಿಯ ದಿಕ್ಕಿನಲ್ಲಿ ಬಳಕೆ ಮಾಡಬೇಕಿದೆ. ಈಗ ಸುಪ್ರೀಂ ಕೋರ್ಟ್ ತಮಿಳುನಾಡಿನ ಅರ್ಜಿಯನ್ನು ವಜಾಗೊಳಿಸಿದೆ. ಕರ್ನಾಟಕದ ಹಕ್ಕನ್ನು ಎತ್ತಿ ಹಿಡಿಯಲಾಗಿದೆ. ಇಲ್ಲಿಯೂ ಕೇಂದ್ರ ಪರಿಸರ ಇಲಾಖೆ ಅನುಮತಿ ಇಲ್ಲವೆಂದು ಕಾದು ಕುಳಿತುಗೊಳ್ಳುವುದು ಸರಿಯಲ್ಲ. ಬಹುಬೇಗ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಡಾ. ಎಂ.ಎಸ್. ಸ್ವಾಮಿನಾಥ್, ಎಂಎಸ್‌ಪಿ ಈ ಸಿ+50 ಸೂತ್ರವನ್ನು ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ವರದಿ ಸಲ್ಲಿಸಿ 26 ವರ್ಷವಾಗಿದೆ. ಆದರೂ ಯಾವುದೇ ತೀರ್ಮಾನ ಮಾಡದೆ ಇರುವುದರಿಂದ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲೂಕು ಅಧ್ಯಕ್ಷ ಮಂಜುನಾಥ ಧ್ರುವಕುಮಾರ ಹೂಗಾರ, ಆದೇಶ ಚೆನ್ನಪ್ಪ ಹುಲಗೂರ, ಚೆನ್ನಪ್ಪ ಸಣ್ಮುಖಿ, ಬಸವರಾಜ ಮುಂತಾದವರು ಉಪಸ್ಥಿತರಿದ್ದರು.ಸರ್ಕಾರ ರೈತರಿಗಾಗಿ ಹಲವಾರು ಯೋಜನೆ ಜಾರಿಗೆ ಮಾಡಿದೆ. ಆದರೆ ಅವುಗಳ ಅನುಷ್ಠಾನ ಮಾಡುವಲ್ಲಿ ಯಾರೂ ಗಮನ ಹರಿಸುತ್ತಿಲ್ಲ. ಅಧಿಕಾರಿಗಳು ರೈತರ ಅವಶ್ಯಕತೆಗೆ ತಕ್ಕಂತೆ ಎಂಎಸ್‌ಪಿ ತೆರೆಯುವುದಿಲ್ಲ. ಖರೀದಿ ಕೇಂದ್ರದಲ್ಲಿ ವೈಜ್ಞಾನಿಕತೆ ಬಗ್ಗೆ ಪ್ರಶ್ನಿಸುತ್ತಾರೆ. ಇದರಿಂದ ರೈತ ಸಂಕಷ್ಟದ ಸ್ಥಿತಿಯಲ್ಲಿದ್ದು, ಸರ್ಕಾರ ರೈತರ ಹಿತ ಕಾಯಲು ಆಲೋಚನೆ ಮಾಡಬೇಕು ಎಂದು ರೈತ ಮುಖಂಡ ಸುರೇಶ ಸಿಂದಗಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ