ಹೊಸಕೋಟೆ: ಟೌನ್ಶಿಪ್ ಯೋಜನೆಯನ್ನು ಕೈಬಿಡುವಂತೆ ರೈತರು ಪ್ರಬಲ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆ ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಪಂ ವ್ಯಾಪ್ತಿಯ ಗೆದ್ದಲಹಳ್ಳಿಪುರ ಗ್ರಾಮದಲ್ಲಿ ಜಮೀನು ಸರ್ವೆಗೆ ಬಂದ ಅಧಿಕಾರಿಗಳ ಲ್ಯಾಪ್ ಟ್ಯಾಪ್ ಕಿತ್ತುಕೊಂಡು ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿ, ಸ್ಥಳದಲ್ಲೆ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಪ್ರತಿಭಟನೆ ನಡೆಸಿದರು.
2006 ಕುಮಾರಸ್ವಾಮಿ ಸರಕಾರದಲ್ಲಿ ಎಸ್ಇಝಡ್ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮಲ್ಲಿಕಾರ್ಜುನ ಖರ್ಗೆ, ಭೂ ಸ್ವಾಧೀನ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ನಂದಗುಡಿ ಭಾಗದ ರೈತರಿಗೆ ಬೆಂಬಲ ಸೂಚಿಸಿದ್ದರು. ಈಗ ಮತ್ತೆ ರಾಜ್ಯ ಸರಕಾರ ಟೌನ್ಶಿಪ್ ಹೆಸರಿನಲ್ಲಿ ಭೂ ಸ್ವಾಧೀನಕ್ಕೆ ಮುಂದಾಗಿರುವುದು ತರವಲ್ಲ ಎಂದರು.
ರೈತ ಮುಖಂಡ ಎಂ.ಬಿ.ವೆಂಕಟೇಶ್ ಮಾತನಾಡಿ, ತಾಲೂಕಿನ ನಂದಗುಡಿ ಮತ್ತು ಸೂಲಿಬೆಲೆ ಹೋಬಳಿ ವ್ಯಾಪ್ತಿಯ 36 ಗ್ರಾಮಗಳ 18500 ಸಾವಿರ ಎಕರೆ ಪ್ರದೇಶವು ವಿವಾದಿತ ಪ್ರದೇಶವಾಗಿದೆ. ಸರಕಾರ ಯಾವುದೇ ರೀತಿಯ ಸರ್ವೇ ಕಾರ್ಯ ನಡೆಸಲು ಅವಕಾಶ ನೀಡುವುದಿಲ್ಲವೆಂದು ನಮ್ಮ ಪ್ರಾಣ ಕೊಟ್ಟಾದರೂ ತಮ್ಮ ಭೂಮಿಯನ್ನು ಉಳಿಸಿಕೊಳ್ಳುತ್ತೇವೆಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾನಿರತ ಸ್ಥಳಕ್ಕೆ ತಹಸೀಲ್ದಾರ್ ಭೇಟಿ ಕೊಟ್ಟು, ಯಾವುದೇ ರೀತಿಯ ಸರ್ವೇ ಕಾರ್ಯ ನಡೆಸಲು ಮುಂದಾಗುವುದಿಲ್ಲವೆAದು ಲಿಖಿತ ಹೇಳಿಕೆ ನೀಡುವಂತೆ ರೈತರು ಪಟ್ಟು ಹಿಡಿದರು. ಅಂತಿಮವಾಗಿ ರೈತರನ್ನು ಅಧಿಕಾರಿಗಳು ಸಂತೈಸಿ ಮನವಿ ಪತ್ರ ಸ್ವೀಕರಿಸಿದ ನಂತರ ಪ್ರತಿಭಟನೆಯನ್ನು ಮೊಟಕುಗೊಳಿಸಿದರು.
ಪ್ರತಿಭಟನೆಯಲ್ಲಿ ನಂದಗುಡಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಸದಸ್ಯರು, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನೂರಾರು ರೈತರು ಭಾಗವಹಿಸಿದ್ದರು.ಫೋಟೋ: 12 ಹೆಚ್ಎಸ್ಕೆ 2 ಮತ್ತು 3
2 ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಪಂ. ವ್ಯಾಪ್ತಿಯ ಗೆದ್ದಲಹಳ್ಳಿಪುರ ಗ್ರಾಮದ ಸಮೀಪದಲ್ಲಿ ಲ್ಯಾಪ್ ಟ್ಯಾಪ್ ಕಿತ್ತುಕೊಂಡು ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿ, ಸ್ಥಳದಲ್ಲೆ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಪ್ರತಿಭಟನೆ ನಡೆಸಿದರು.