ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ

KannadaprabhaNewsNetwork |  
Published : Jul 14, 2026, 02:00 AM IST
ಸಿರುಗುಪ್ಪ ನಗರದ ನಗರದ ಎಪಿಎಂಸಿಯ ಶ್ರಮೀಕ ಭವನದಲ್ಲಿ ಸುದ್ದಿಗಾರೊಂದಿಗೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವಿ.ಎಸ್.ಶಿವಶಂಕರ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಶೇ.80ರಿಂದ 90ರಷ್ಟು ಮಳೆ ಕೊರತೆಯಾಗಿದೆ. ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ.

​ಸಿರುಗುಪ್ಪ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿಯ ಸದಸ್ಯರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಸೋಮವಾರ ಒತ್ತಾಯಿಸಿದರು.​

ನಗರದ ಎಪಿಎಂಸಿಯ ಶ್ರಮಿಕ ಭವನದಲ್ಲಿ ಸುದ್ದಿಗಾರೊಂದಿಗೆ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವಿ.ಎಸ್.ಶಿವಶಂಕರ ಮಾತನಾಡಿ, ಜಿಲ್ಲೆಯಲ್ಲಿ ಶೇ.80ರಿಂದ 90ರಷ್ಟು ಮಳೆ ಕೊರತೆಯಾಗಿದೆ. ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ. ಈಗಾಗಲೇ ಬಿತ್ತನೆ ಮಾಡಿರುವ ರೈತರು ಮಳೆಯಿಲ್ಲದೇ ಬೆಳೆ ನಷ್ಟದ ಭೀತಿಯಲ್ಲಿದ್ದಾರೆ. ಇನ್ನು ಹಲವೆಡೆ ಬಿತ್ತನೆಯೇ ಸಾಧ್ಯವಾಗಿಲ್ಲ. ಈ ಭೀಕರ ಬರಗಾಲದ ಪರಿಸ್ಥಿತಿಯಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

​ರೈತರು ಮತ್ತು ಕೃಷಿ ಕಾರ್ಮಿಕರು ಜೀವನೋಪಾಯಕ್ಕಾಗಿ ಬೇರೆ ಕಡೆಗೆ ವಲಸೆ ಹೋಗುವುದನ್ನು ತಡೆಯಲು ತಕ್ಷಣವೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಹೆಚ್ಚಿನ ಕೆಲಸದ ದಿನಗಳನ್ನು ಒದಗಿಸಬೇಕು. ಸಂಕಷ್ಟದಲ್ಲಿರುವ ರೈತರ ನೆರವಿಗಾಗಿ ₹50,000 ವರೆಗಿನ ಕೃಷಿ ಸಾಲವನ್ನು ತಕ್ಷಣವೇ ಮನ್ನಾ ಮಾಡಬೇಕು. ಜಿಲ್ಲೆಯ ಜಲಾಶಯಗಳಲ್ಲಿ ನೀರಿನ ಮಟ್ಟ ತಳ ತಲುಪಿದ್ದು, ಜಾನುವಾರುಗಳಿಗೆ ತೀವ್ರ ಮೇವು ಮತ್ತು ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಸರ್ಕಾರ ತಕ್ಷಣವೇ ಕೆರೆಗಳನ್ನು ತುಂಬಿಸುವ ಕೆಲಸ ಮಾಡಬೇಕು ಹಾಗೂ ಜಾನುವಾರುಗಳಿಗೆ ಮೇವಿನ ಬ್ಯಾಂಕ್‌ಗಳನ್ನು ತೆರೆಯಬೇಕು ಎಂದರು.

ರೈತರ ಈ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಮ್ಮ ಸಂಘಟನೆಯು ಜು.25, 26ರಂದು ಜಿಲ್ಲಾದ್ಯಂತ ಬೃಹತ್ ಹೋರಾಟ ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ರೈತರ ವಲಸೆಯನ್ನು ತಡೆಗಟ್ಟಲು ಮತ್ತು ಈ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ತಾಲೂಕು ಅಧ್ಯಕ್ಷ ವಿ.ಮಾರುತಿ, ಉಪಾಧ್ಯಕ್ಷರು ಎಚ್.ಗಾಳೆಪ್ಪ, ಸದಸ್ಯರಾದ ಓಬಳಪ್ಪ, ಸರ್ದಾರಪ್ಪ, ವೈ.ಹನುಮೇಶ್, ಸಿಲ್ವಡೆಪ್ಪ, ಕಾಕೇರು ಓಬಳೇಶ್, ಕಾಕೇರ್ ಬಸಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕ ಅದಾಲತ್‌: ಹೈಕೋರ್ಟ್‌ನಲ್ಲಿ 366 ಪ್ರಕರಣ ಇತ್ಯರ್ಥ
ಜೀವ ರಕ್ಷಣೆಯ ಪವಿತ್ರ ವೃತ್ತಿ ವೈದ್ಯರದು