ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಏರ್ಪಡಿಸಿದ್ದ ನರಗುಂದ ಬಂಡಾಯ 44ನೇ ರೈತ ಹುತಾತ್ಮ ದಿನಾಚಚರಣೆಯಲ್ಲಿ ಮಾತನಾಡಿದರು.
ಬೆಳೆ ವಿಮೆ ನೀತಿ ಬದಲಾಗಬೇಕುಕೃಷಿ ಸಾಲ ನೀತಿ ಬದಲಾಗಬೇಕು, ಜಮೀನು ಮೌಲ್ಯದ ಶೇ 75 ರಷ್ಟು ಸಾಲ ನೀಡಬೇಕು. ಬೆಳೆ ವಿಮೆ ನೀತಿ ಬದಲಾಗಬೇಕು, ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿ ಬರಬೇಕು ಎಂದರು.ರಾಜ್ಯದಲ್ಲಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರದ್ದಾಗಬೇಕು. ಕೃಷಿಕರ ಭೂಮಿ ಬಂಡವಾಳ ಶಾಹಿಗಳ ವಶವಾಗುವುದು ತಪ್ಪಬೇಕು ಎಂದು ಇತ್ತೀಚೆಗೆ ಚಾಮರಾಜನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದ ರೈತಸಂಘದ ಮುಖಂಡರು ತಮ್ಮ ಸಮಸ್ಯೆಗಳನ್ನು ತೋಡಿಕೊಂಡು ಪರಿಹರಿಸುವಂತೆ ನೀಡಿದ ಮನವಿ ಪತ್ರಗಳನ್ನು ತಮ್ಮ ಜತೆಗೆ ತೆಗೆದುಕೊಂಡು ಹೋಗುವ ಸೌಜನ್ಯ ತೋರದೆ ಕಸದ ಬುಟ್ಟಿಗೆ ಎಸೆದಿರುವುದು ಖಂಡನೀಯ. ಸಮಾಜವಾದಿ ಚಳವಳಿಯಿಂದ ಬಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಈ ನಡೆ ನಿರೀಕ್ಷೆ ಮಾಡಿರಲಿಲ್ಲ ಎಂದು ಕಿಡಿಕಾರಿದರು.ಪಂಪ್ಸೆಟ್ಗೆ ಆಧಾರ್ ಲಿಂಕ್ ಬೇಡ
ರೈತರಿಂದ ಮೆರವಣಿಗೆ:
44ನೇ ವರ್ಷದ ಹುತಾತ್ಮರ ದಿನಾಚರಣೆಯಲ್ಲಿ ಮೌನಾಚರಣೆಯೊಂದಿಗೆ ಮೊಂಬತ್ತಿ ಬೆಳಗುವ ಮೂಲಕ ಮಡಿದ ರೈತರ ಆತ್ಮಗಳಿಗೆ ಶಾಂತಿಯನ್ನು ಕೋರಲಾಯಿತು. ಕಾರ್ಯಕ್ರಮದಲ್ಲಿ ಸಂದರ್ಭದಲ್ಲಿ ಪ್ರಗತಿಪರ ರೈತರನ್ನ ಗೌರವಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಒಕ್ಕಲಿಗರ ಕಲ್ಯಾಣ ಮಂಟದಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆಯಲ್ಲಿ ಸಾಗಿಬರಲಾಯಿತು.ಈ ವೇಳೆ ಹಸಿರು ಸೇನೆಯ ರಾಜ್ಯಾಧ್ಯಕ್ಷ ಶಿವಮೊಗ್ಗದ ಕರಿಬಸಪ್ಪಗೌಡ ,ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸಂಚಾಲಕ ಸಿ.ವಿ.ಲೋಕೇಶ್ ಗೌಡ,ಗಡಿನಾಡು ರಾಜ್ಯ ರೈತಸಂಘದ ಯಣ್ಣೂರು ಬಸವರಾಜು,ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಹುರುಳಿ, ತುಮಕೂರು ಜಿಲ್ಲೆ ಅಧ್ಯಕ್ಷ ಶಿವಕುಮಾರ್, ಮೈಸೂರು ಜಿಲ್ಲೆ ಅಧ್ಯಕ್ಷ ಹತ್ತಳ್ಳಿ ದೇವರಾಜ್,ಪದಾಧಿಕಾರಿಗಳಾದ ಶ್ರೀಕಾಂತ್ ರೆಡ್ಡಿ,ವೆಂಕಟಾಶಿವರೆಡ್ಡಿ ರಾಮಲಕ್ಷ್ಮಮ್ಮ ಕಾಂತಮ್ಮ ಇನ್ನು ಮುಂತಾದ 400 ಹೆಚ್ಚು ರೈತರು ಭಾಗವಹಿಸಿದ್ದರು.