ತಾಲೂಕು ಕಚೇರಿ ಮುಂದೆ ಧರಣಿ । ಪರಿಹಾರಕ್ಕೆ ಗಡುವು
ಬೇಸಿಗೆ ಆರಂಭವಾಗುತ್ತಿದ್ದು, ಸುಡು ಬಿಸಿಲಿಗೆ ಬೆಳೆಗಳು ಬಾಡುತ್ತಿವೆ. ನೀರು ಅವಶ್ಯಕವಾಗಿರುವ ಹೊತ್ತಿನಲ್ಲಿ ರೈತರ ಪಂಪ್ ಸೆಟ್ ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ಜೊತೆಗೆ ಕೆಟ್ಟು ಹೋದ ಪರಿವರ್ತಕಗಳನ್ನು ನೀಡಲಾಗುತ್ತಿದೆ. ಸುಟ್ಟ ಪರಿವರ್ತಕ ಸರಿಪಡಿಸಲು ೧೫ ರಿಂದ ೨೦ ದಿನ ತೆಗೆದುಕೊಳ್ಳುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ದಿನಕ್ಕೆ ೩ ಪೇಸ್ ವಿದ್ಯುತ್ ಸರಿಯಾಗಿ ನೀಡದೆ ರೈತರನ್ನು ಸತಾಯಿಸುತ್ತಿದ್ದಾರೆ. ತಕ್ಷಣ ಇದನ್ನು ಸರಿಪಡಿಸಬೇಕು. ಪರಿವರ್ತಕಗಳನ್ನು ಎರಡು ದಿನದಲ್ಲಿ ಸರಿಪಡಿಸಿಕೊಡಬೇಕು. ೩ ಪೇಸ್ ವಿದ್ಯುತ್ ಟ್ರಿಪ್ ಆದಲ್ಲಿ ಅದನ್ನು ಬೇರೆ ಸಮಯದಲ್ಲಿ ರೈತರಿಗೆ ನೀಡಬೇಕು. ನಿರಂತರ ಜ್ಯೋತಿ ೩ ಪೇಸ್ ವಿದ್ಯುತ್ ಹಾಕುವುದನ್ನು ನಿಲ್ಲಿಸಬೇಕು. ವಿಭಾಗಾಧಿಕಾರಿಗಳು ಆಯಾ ಭಾಗದ ರೈತರ ಸಮಸ್ಯೆಗಳಿಗೆ ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸದೆ ರೈತರಿಗೆ ಸತಾಯಿಸುತ್ತಿದ್ದಾರೆ ಎಂದು ದೂರಿದರು.ರೈತರ ಒತ್ತಾಯಗಳನ್ನು ರೈತರ ಸಮಸ್ಯೆಗಳನ್ನು ೧೫ ದಿನಗಳೊಳಗಾಗಿ ಬಗಿಹರಿಸಬೇಕು. ಇಲ್ಲವಾದಲ್ಲಿ ವಿದ್ಯತ್ ಇಲಾಖೆಯ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.