ದೆಹಲಿಯಲ್ಲಿ ರೈತರ ಬಂಧನ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

KannadaprabhaNewsNetwork |  
Published : Feb 18, 2024, 01:30 AM IST
17ಕೆಎಂಎನ್ ಡಿ36 | Kannada Prabha

ಸಾರಾಂಶ

ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಅನೇಕ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಸುತ್ತಿದ್ದ ಚಳವಳಿಯನ್ನು ಕೇಂದ್ರ ಸರ್ಕಾರ ಹತ್ತಿಕುವ ಸಲುವಾಗಿ ಅರೆಸೇನಾ ಪಡೆ, ಪೊಲೀಸ್ ಬಲದಿಂದ ರೈತರನ್ನು ತಡೆದು ಅವರನ್ನು ಬಂಧಿಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರದ ರೈತರ ಕ್ಷಮೆ ಕೇಳಬೇಕು. ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮದ್ದೂರುದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಬಂಧನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿಗೆ ರೈತರು ಮುತ್ತಿಗೆ ಹಾಕಿದ ವೇಳೆ ರೈತ ಸಂಘದ ಹಿರಿಯ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿ, ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಅನೇಕ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಸುತ್ತಿದ್ದ ಚಳವಳಿಯನ್ನು ಕೇಂದ್ರ ಸರ್ಕಾರ ಹತ್ತಿಕುವ ಸಲುವಾಗಿ ಅರೆಸೇನಾ ಪಡೆ, ಪೊಲೀಸ್ ಬಲದಿಂದ ರೈತರನ್ನು ತಡೆದು ಅವರನ್ನು ಬಂಧಿಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ರಾಷ್ಟ್ರದ ರೈತರ ಕ್ಷಮೆ ಕೇಳಬೇಕು. ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಹಿರಿಯ ಮುಖಂಡ ಅಣ್ಣೂರು ಮಹೇಂದ್ರ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗ ಜಗ್ಗಾಟದಿಂದ ರಾಜ್ಯದ ರೈತರು ಪರಿತಪಿಸುವಂತಾಗಿದೆ. ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ರೈತರು ಮಾಡಿರುವ ಎಲ್ಲ ಕೃಷಿ ಸಾಲ, ಬ್ಯಾಂಕ್, ಸಹಕಾರ ಸಂಘ ಸಾಲಗಳನ್ನು ಮನ್ನಾ ಮಾಡಬೇಕು. ಬರಗಾಲದಿಂದ ಉಂಟಾಗಿರುವ ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು. ರೈತರಿಗೆ ನರೇಗಾ ಅಡಿಯಲ್ಲಿ ವಿವಿಧ ಕೆಲಸಗಳನ್ನು ನೀಡುವ ಮೂಲಕ ಆರ್ಥಿಕ ಹೊರೆಯನ್ನು ತಗ್ಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ಸ್ಥಳಕ್ಕೆ ತಹಸೀಲ್ದಾರ್ ಕೆ.ಎಸ್. ಸೋಮಶೇಖರ್ ಆಗಮಿಸಿ ರೈತರಿಂದ ಮನವಿ ಸ್ವೀಕರಿಸಿ, ತಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಪತ್ರ ವ್ಯವಹಾರ ಮಾಡಲಾಗುವುದು ಎಂದು ಭರವಸೆ ನೀಡಿದ ನಂತರ ತಮ್ಮ ಪ್ರತಿಭಟನೆ ಹಿಂಪಡೆದರು.

ರೈತ ಸಂಘದ ಮುಖಂಡರಾದ ಸೊ.ಸಿ.ಪ್ರಕಾಶ, ಪಣ್ಣೆದೊಡ್ಡಿ ವೆಂಕಟೇಶ, ರಮೇಶ, ಕೆ.ಎಸ್.ಪುಟ್ಟಸ್ವಾಮಿ, ಬಿ.ಎಂ. ದೇವರಾಜು, ಕೆ.ಬಿ.ರಾಜು, ಉಮೇಶ, ಚನ್ನಪ್ಪ, ಕೃಷ್ಣ, ಹನುಮಂತಯ್ಯ, ಲಿಂಗರಾಜು, ಎಂ.ಸಿ. ರಾಜೇಶ, ಲಿಂಗೇಗೌಡ, ಕೆ.ಎಸ್. ರಾಮಲಿಂಗೇಗೌಡ, ಕೆ.ಟಿ. ಚಂದ್ರಶೇಖರ್, ಮಹದೇವಸ್ವಾಮಿ ಸೇರಿದಂತೆ ಇತರರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ