ಶೂ ತೂರಲು ಯತ್ನಿಸಿದ ಘಟನೆ ಖಂಡಿಸಿ ದಲಿತ ಹಿತರಕ್ಷಣ ಒಕ್ಕೂಟ ಪ್ರತಿಭಟನೆ

KannadaprabhaNewsNetwork |  
Published : Oct 15, 2025, 02:08 AM IST
ಭಾರತ | Kannada Prabha

ಸಾರಾಂಶ

ಕೊಡಗು ಜಿಲ್ಲಾ ಹಿತರಕ್ಷಣಾ ಒಕ್ಕೂಟ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಭಾರತ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ಘಟನೆಯನ್ನು ಖಂಡಿಸಿ, ಆರೋಪಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ದೆಹಲಿಯಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಹಿತರಕ್ಷಣ ಒಕ್ಕೂಟ ಶುಕ್ರವಾರ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವಸರಪಳಿ ರಚಿಸಿ ಪ್ರತಿಭಟನೆ ನಡೆಸಿತು.ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಮಯದಲ್ಲಿ ನ್ಯಾಯವಾದಿ ರಾಕೇಶ್ ನ್ಯಾಯಪೀಠದ ಮೇಲೆ ಶೂ ಎಸೆಯಲು ಮುಂದಾದ ವ್ಯಕ್ತಿಯ ನಡುವಳಿಗೆ ಸಂವಿಧಾನ ವಿರೋಧಿಯಾಗಿದೆ ಎಂದು ಒಕ್ಕೂಟದ ಗೌರವಾಧ್ಯಕ್ಷ ಜಯಪ್ಪ ಹಾನಗಲ್ ಹೇಳಿದರು. ಒಕ್ಕೂಟದ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ ಮಾತನಾಡಿ ಆರೋಪಿ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕ್ರಮವಾಗಬೇಕು. ಇದರೊಂದಿಗೆ ಮತ್ತೊಬ್ಬ ವಕೀಲರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕೊಳಕು ಮನುಷ್ಯ ಎಂದು ಅವಮಾನಿಸಿರುವ ವರದಿಯಾಗಿದ್ದು, ಇವರ ಮೇಲೂ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವ ತನಕ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಸಿದರು.ನಂತರ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾ ಕಾರರು ತಹಸೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭ ಒಕ್ಕೂಟದ ಉಪಾಧ್ಯಕ್ಷ ಕೆ.ಬಿ. ರಾಜು, ಕಾರ್ಯದರ್ಶಿ ಬಿ.ಇ.ಜಯೇಂದ್ರ, ಸಹ ಕಾರ್ಯದರ್ಶಿ ಮಹೇಶ್, ಖಜಾಂಚಿ ಎಚ್.ಎ. ನಾಗರಾಜು, ಪದಾಧಿಕಾರಿಗಳಾದ ಜೆ.ಆರ್. ಪಾಲಾಕ್ಷ, ಸುರೇಶ್, ಈರಪ್ಪ ಪ್ರಗತಿಪರ ಚಿಂತಕರು, ದಲಿತಪರ ಹೋರಾಟಗಾರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!