ಕನ್ನಡಪ್ರಭ ವಾರ್ತೆ ಮಂಡ್ಯ
ಪ್ರಕೃತಿ ವಿಕೋಪದಿಂದ ದೇಶದ ಎಲ್ಲ ಭಾಗಗಳಲ್ಲಿಯೂ ವಿಪರೀತ ಮಳೆಯಾಗುತ್ತಿದೆ. ಇದರಿಂದ ರೈತರ ಬೆಳೆ ಹಾನಿಯಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಈ ನಿಟ್ಟಿನಲ್ಲಿ ರಾಜಸ್ತಾನದಲ್ಲಿ ಸೋಯಾಬಿನ್ ಸೇರಿದಂತೆ ಹಲವು ಬೆಳೆ ಅತಿವೃಷ್ಟಿಯಿಂದ ಹಾನಿಯಾಗಿದ್ದು, ೨೫ ಸಾವಿರ ರೈತರನ್ನು ಸಂಘಟಿಸಿ ಹೋರಾಟ ನಡೆಸಿದ ಪರಿಣಾಮ ಅಲ್ಲಿನ ಸರ್ಕಾರ ಪರಿಹಾರ ನೀಡಲು ಒಪ್ಪಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಕುಂಭಮೇಳಕ್ಕೆ ೧೦ ಸಾವಿರ ರೈತರ ಭೂಮಿಯನ್ನು ಶಾಶ್ವತವಾಗಿ ವಶಪಡಿಸಿಕೊಂಡು ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಯೋಜನೆ ರೂಪಿಸಿತ್ತು. ೧ ಸಾವಿರ ಟ್ರ್ಯಾಕ್ಟರ್ಗಳೊಂದಿಗೆ ಸಾವಿರಾರು ರೈತರು ಹೋರಾಟ ನಡೆಸಿದ ಪರಿಣಾಮ ೬ ತಿಂಗಳು ಕುಂಭಮೇಳ ನಡೆಸಿ ರೈತರಿಗೆ ಭೂಮಿ ಹಿಂದಿರುಗಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ವಿವರಿಸಿದರು.ರೈತರ ಭೂಮಿಯನ್ನು ಕೊಡಲ್ಲ:
ದೆಹಲಿಯಲ್ಲಿ ರೈತ ಹೋರಾಟದ ಸಂದರ್ಭದಲ್ಲಿ ಹಸಿರು ಟವಲ್ನ್ನು ರಾಜಕಾರಣಿಗಳು ಬಳಸಿ ಅದಕ್ಕೆ ರಾಜಕೀಯದ ಸ್ವರೂಪ ನೀಡಿದ್ದಾರೆ. ಆದ್ದರಿಂದ ದೇಶಾದ್ಯಂತ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಹಸಿರು ಟವಲ್ ಹಾಕದಂತೆ ರಾಷ್ಟ್ರ ಮಟ್ಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯದಲ್ಲಿಯೂ ಅಳವಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಇಲ್ಲಿನ ಹೋರಾಟಗಾರರು ಕಾಲಾವಕಾಶ ಕೇಳಿದ ಹಿನ್ನೆಲೆ ಇನ್ನೂ ಹಸಿರು ಟವಲ್ ಧರಿಸಿ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಹಾಡ್ಯ ರಮೇಶ್ರಾಜು, ಪ್ರಧಾನ ಕಾರ್ಯದರ್ಶಿ ಪಿ.ಎಲ್.ಸೋಮಶೇಖರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿ.ವೆಂಕಟೇಶ್, ಜಿಲ್ಲಾಧ್ಯಕ್ಷ ಅಪ್ಪಾಜಿಗೌಡ, ಜಿಲ್ಲಾ ಕಾರ್ಯಕಾರಣಿ ಸದಸ್ಯ ದುರ್ಗೇಶ್ ಹಾಜರಿದ್ದರು.