ಬೀದರ್ ಕೋಟೆ ಮೇಲೆ ಆಕರ್ಷಕ ಏರ್ ಶೋ

KannadaprabhaNewsNetwork |  
Published : Sep 22, 2024, 01:52 AM IST
ಚಿತ್ರ 21ಬಿಡಿಆರ್56ಎ | Kannada Prabha

ಸಾರಾಂಶ

ಬೀದರ್ ಕೋಟೆಯಲ್ಲಿ ಸೂರ್ಯಕಿರಣ ವಿಮಾನಗಳಿಂದ ಆಕರ್ಷಕ ಏರ್ ಶೋ ನೋಡಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ ಸಿಇಓ ಡಾ. ಬದೋಲೆ ಕುಟುಂಬದ ಸದಸ್ಯರೊಂದಿಗೆ ಅಲ್ಲದೇ ಶಾಲಾ ಮಕ್ಕಳು., ಸಾರ್ವಜನಿಕರು ಇದ್ದರು.

ಬೀದರ್‌:

ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ವಿಮಾನಗಳ ಏರೋಬ್ಯಾಟಿಕ್ ಟೀಂನಿಂದ ಬೀದರ್‌ ಕೋಟೆಯ ಮೇಲೆ ಶನಿವಾರ ಆಕರ್ಷಕ ಏರ್ ಶೋ ನಡೆಯಿತು. ಸೂರ್ಯಕಿರಣ ವಿಮಾನಗಳ ಟೀಂ ಲೀಡರ್ ಗ್ರೂಪ್ ಕ್ಯಾಪ್ಟನ್ ಗುರುಪ್ರಿತಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರ ಕಣ್ಮನ ಸೆಳೆದವು. ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ನೌಕರರು ಖುಷಿ ಪಟ್ಟರು.

ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ, ಪರಸ್ಪರ ಒಂದನೊಂದು ಎದುರಿಗೆ ಕ್ರಾಸಿಂಗ್, ಬ್ಯಾರಲ್ ರೋಲ್, ಕೇಸರಿ, ಬಿಳಿ, ಹಸಿರು ಬಣ್ಣದ ಚಿತ್ರ ಬಿಡುಸುವ ಮೂಲಕ ಆಕಾಶದಲ್ಲಿ ಚಿತ್ತಾರ ಮೂಡಿಸಿದವು. ಕೆಲವೊಂದು ಸಲ ಒಂಟಿಯಾಗಿ, ಜೋಡಿಯಾಗಿ ಮತ್ತು ತಂಡವಾಗಿ ಬರುತ್ತಿದ್ದ ವಿಮಾನಗಳು ಯಾವ ದಿಕ್ಕಿನಿಂದ ವಿಮಾನಗಳು ಆಕಾಶದಲ್ಲಿ ಬರುತ್ತಿವೆ ಎನ್ನುವುದನ್ನು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದರು.

1996ರಲ್ಲಿ ಆರಂಭಿಸಲಾದ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ ಶ್ರೀಲಂಕಾ, ಸಿಂಗಾಪುರ್, ದುಬೈ ಸೇರಿದಂತೆ ಇತರೆ ದೇಶಗಳಲ್ಲಿ 600ಕ್ಕಿಂತಲೂ ಹೆಚ್ಚಿನ ಪ್ರದರ್ಶನ ನೀಡಿವೆ. 9 ವಿಮಾನಗಳ ಈ ಏರಕ್ರಾಪ್ಟ್ ಟೀಂ ಇಡೀ ಏಷ್ಯಾ ಖಂಡದ ಭಾರತದಲ್ಲಿ ಮಾತ್ರ ಇರುವುದು. ಏರ್ ಶೋ ಕಾರ್ಯಕ್ರಮದಲ್ಲಿ ಬೀದರ್‌ ನಗರಸಭೆ ಅಧ್ಯಕ್ಷರಾದ ಮೋಹ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಏರ್ ಫೋರ್ಸ ಸ್ಟೇಷನ್ ಬೀದರಿನ ಕಮೊಡೊರ್ ಪರಾಗಲಾಲ್, ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಎಸ್ಪಿ ಪ್ರದೀಪ್ ಗುಂಟಿ, ಎಡಿಸಿ ಶಿವಕುಮಾರ ಶೀಲವಂತ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರು, ಏರ್ ಫೋರ್ಸ ಸ್ಟೇಷನ್ ಅಧಿಕಾರಿಗಳು, ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ