ಕನ್ನಡಪ್ರಭ ವಾರ್ತೆ ಮಂಗಳೂರು
ಕಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ ದಾಖಲು ಪ್ರಕ್ರಿಯೆ ಅತ್ಯಂತ ಸರಳವಾಗಿದ್ದು, ಅತಿ ಕಡಿಮೆ ಅವಧಿಯಲ್ಲಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಕಾಯಂ ಜನತಾ ನ್ಯಾಯಾಲಯವು ಪರ್ಯಾಯ ಪರಿಹಾರ ವ್ಯವಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರೇ ಸೇವೆಯಲ್ಲಿರುತ್ತಾರೆ. ಸರಳ ದಾಖಲೆ ಪ್ರಕ್ರಿಯೆ ಮತ್ತು ಅಗತ್ಯವಿದ್ದರೆ ಮಾತ್ರ ಸಾಕ್ಷಿ ವಿಚಾರಣೆ ನಡೆಯಲಿದೆ. ಯಾವುದೇ ನ್ಯಾಯಾಲಯ ಶುಲ್ಕ ಇರುವುದಿಲ್ಲ. ಸಾರಿಗೆ ಸೇವೆ, ಅಂಚೆ, ವಿದ್ಯುತ್, ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆ, ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್, ವಿಮೆ, ವೈದ್ಯಕೀಯ ನಿರ್ಲಕ್ಷ್ಯತೆ ಮತ್ತಿತರ ಪ್ರಕರಣಗಳನ್ನು ಇಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ವಿವಿಧ ಸಾಲ ಸಂಬಂಧಿತ ವ್ಯಾಜ್ಯಗಳನ್ನು ಕೂಡ ಇಲ್ಲಿ ಪರಿಹರಿಸಿಕೊಳ್ಳಬಹುದು. ಇಲ್ಲಿನ ಆದೇಶವು ಅಂತಿಮವಾಗಿದ್ದು ಮೇಲ್ಮನವಿಗೆ ಅವಕಾಶವಿಲ್ಲ. 1 ಕೋಟಿ ರು.ವರೆಗಿನ ಮೊತ್ತದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಗೊಳಿಸಲಾಗುತ್ತದೆ. ಅತಿ ಸಣ್ಣ ಮೊತ್ತದ ಪ್ರಕರಣಗಳನ್ನು ಕೂಡ ದಾಖಲಿಸಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಜೈಬುನ್ನೀಸಾ, ಕಾಯಂ ಜನತಾ ನ್ಯಾಯಾಲಯದ ಸದಸ್ಯರಾದ ಫಜಲ್ ರಹೀಮ್, ಲಾವಣ್ಯ ರೈ ಹೆಗ್ಡೆ ಇದ್ದರು.