ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮಲ್ಲೇಶ್ಗೆ ನಗರಸಭೆ ಒಂದು ವರ್ಷದವರೆಗೆ ಷರತ್ತುಬದ್ಧ ಪರವಾನಿಗೆ ನೀಡಿತ್ತು. ಈಗ ಅದು ರದ್ದಾಗಿದೆ, ಈ ಒಂದು ಗುಂಟೆ ಜಮೀನು ಕಾನೂನು ಬದ್ಧವಾಗಿ ಅನ್ಯಕ್ರಾಂತವಾಗಿಲ್ಲ, ಅಕ್ಕಪಕ್ಕದ ಜಾಗವನ್ನು ಒತ್ತುವರಿ ಮಾಡಿಕೊಂಡು ಕ್ಯಾಂಟೀನ್ ಮತ್ತು ವಾಹನ ನಿಲ್ದಾಣದ ಶೆಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.ಹಲವಾರು ಬಾರಿ ತಹಸೀಲ್ದಾರ್ ಮತ್ತು ನಗರಸಭಾ ಆಯುಕ್ತರು ವಾಹನ ನಿಲ್ದಾಣವನ್ನು ತೆರವುಗೊಳಿಸಬೇಕೆಂದು ನೋಟಿಸ್ ನೀಡಿದ್ದರೂ ಯಾವುದಕ್ಕೂ ಬಗ್ಗದೆ ಮುಂದುವರಿಯುತ್ತಿದ್ದಾರೆ. ನಗರಸಭೆ ಅಧಿಕಾರಿಗಳು ತೆರವುಗೊಳಿಸಲು ಸ್ಥಳಕ್ಕೆ ಭೇಟಿ ನೀಡಿದಾಗ ಮಲ್ಲೇಶ್ ದಂಪತಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿ ವಾಪಸು ಕಳುಹಿಸಿದ್ದಾರೆ ಎಂದರು. ರೈಲ್ವೆ ಇಲಾಖೆಯ ವಾಣಿಜ್ಯ ಪ್ರಬಂಧಕರು ಈ ಅನಧಿಕೃತ ವಾಹನ ನಿಲ್ದಾಣವನ್ನು ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿಗೆ, ನಗರಸಭೆ ಪೌರಾಯುಕ್ತರಿಗೆ ಪತ್ರ ಬರೆದಿದ್ದಾರೆ. ಇದನ್ನು ಪ್ರಶ್ನಿಸಿ ಮಲ್ಲೇಶ್ ಹೈಕೋರ್ಟಿಗೆ ಮೇಲನ್ಮವಿ ಸಲ್ಲಿಸಿದ್ದಾರೆ ಎಂದರು.ಕಾನೂನು ಬಾಹಿರವಾಗಿ ಅನಧಿಕೃತವಾಗಿ ಕೃಷಿ ಜಮೀನಿನಲ್ಲಿ ಮನೆ ಹಾಗೂ ವಾಹನ ನಿಲ್ದಾಣ ಶೆಡ್ ಹಾಕಿಕೊಂಡಿರುವ ಮಲ್ಲೇಶ್ ವಿರುದ್ಧ ಮೊಕದ್ದಮೆ ದಾಖಲಿಸಿ, ಕ್ಯಾಂಟೀನ್ ಹಾಗೂ ವಾಹನ ನಿಲ್ದಾಣವನ್ನು ತೆರವುಗೊಳಿಸಬೇಕು ಇಲ್ಲದಿದ್ದರೆ ಕುಟುಂಬ ಸಮೇತ ಅಮರಣಾಂತರ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಮೂರ್ತಿ ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಂಕರ್ ದಡದಹಳ್ಳಿ, ಅನಂತಕುಮಾರ್, ಮಧುಸೂದನ್, ನಾಗರಾಜು ಇದ್ದರು.