ನೂತನ ತಂತ್ರಜ್ಞಾನದಿಂದ ಗ್ರಾಹಕರಿಗೆ ತ್ವರಿತ ಸೇವೆ-ರಮೇಶ ಮಡಿವಾಳರ

KannadaprabhaNewsNetwork |  
Published : Jun 23, 2025, 11:52 PM IST
ಸೋಮವಾರ ಐಟಿ 2.0 ಕಾರ್ಯಕ್ರಮವನ್ನು ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಉದ್ಘಾಟಿಸಿ ಸಿಹಿ ವಿತರಿಸಿದರು. | Kannada Prabha

ಸಾರಾಂಶ

ಅಂಚೆ ಇಲಾಖೆಯಲ್ಲಿ ಐಟಿ 2.0 ತಂತ್ರಜ್ಞಾನ ಆರಂಭವಾಗಿದ್ದು, ಇದರಿಂದಾಗಿ ತ್ವರಿತ ಮತ್ತು ಉತ್ತಮ ಸೇವೆ ದೊರೆಯಲಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು.

ಗದಗ: ಅಂಚೆ ಇಲಾಖೆಯಲ್ಲಿ ಐಟಿ 2.0 ತಂತ್ರಜ್ಞಾನ ಆರಂಭವಾಗಿದ್ದು, ಇದರಿಂದಾಗಿ ತ್ವರಿತ ಮತ್ತು ಉತ್ತಮ ಸೇವೆ ದೊರೆಯಲಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು.

ಅವರು ಸೋಮವಾರ ಅಂಚೆ ಇಲಾಖೆಯ ಪ್ರಧಾನ ಅಂಚೆ ಕಚೇರಿಯಲ್ಲಿ ಐಟಿ 2.0 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಂಚೆ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಅಗತ್ಯವಾದ ತಂತ್ರಾಂಶಗಳನ್ನು ನುರಿತ ಅಂಚೆ ತಂತ್ರಜ್ಞರಿಂದ ತಯಾರಿಸಿದೆ.

ದೇಶದಲ್ಲಿಯೇ ಕರ್ನಾಟಕದಲ್ಲಿ ಪ್ರಾಯೋಗಿಕವಾಗಿ ಈ ತಂತ್ರಾಂಶ ಜಾರಿಗೆ ತಂದಿದೆ. ಈಗಾಗಲೇ ಅಂಚೆ ಇಲಾಖೆ ಹಲವು ದಶಕಗಳಿಂದ ಜನರ ಮನೆ ಬಾಗಿಲಿಗೆ ವಿಶ್ವಾಸಾರ್ಹ ಸೇವೆ ನೀಡುತ್ತಿದೆ. ಈ ಸಾಲಿಗೆ ಈಗ ಹೊಸ ನವೀಕರಣದೊಂದಿಗೆ ಗ್ರಾಹಕ ಮತ್ತು ಅಂಚೆ ನೌಕರರ ಸ್ನೇಹಿಯಾಗಿ ರೂಪಾಂತರಗೊಳಲಿದೆ ಎಂದರು.

ಗದಗ ಉಪ ವಿಭಾಗ ಸಹಾಯಕ ಅಂಚೆ ಅಧೀಕ್ಷಕ ಶ್ರೀಕಾಂತ ಜಾಧವ ಹಾಗೂ ಉಪ ಅಂಚೆ ಪಾಲಕ ದೊಡ್ಡಪ್ಪ ಇಟಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಭಾಗೀಯ ಸಹಾಯಕ‌ ಅಂಚೆ ಅಧೀಕ್ಷಕ ವಿ.ಸುನೀಲಕುಮಾರ, ಡಿ.ಜಿ. ಮ್ಯಾಗೇರಿ, ಶರಣಪ್ಪ ನಾಯ್ಕರ, ವೆಂಕಟೇಶ ಆಕಳವಾಡಿ, ವೀರಣ್ಣ ಅಂಗಡಿ, ಎಸ್.ವಿ. ಹಿರೇಮಠ, ಸಿದ್ಧಲಿಂಗೇಶ ಯಂಡಿಗೇರಿ, ವೈ.ಎಸ್. ಗುಗ್ಗರಿ, ಮನೋಹರ ಕಡಿಯವರ, ಉಮೇಶ ಸಂದಿಮನಿ, ಮಹಾಂತೇಶ ಗದಗ, ರವಿ ಜಾದವ, ವಾಣಿ ಮಾಂಡ್ರೆ, ಸರೋಜ ಪಟ್ಟಶೆಟ್ಟಿ, ನೀಲಮ್ಮ ದಿಬ್ಬದಮನಿ, ವಿದ್ಯಾ ಗದಗ, ಶಿವರಾಜ ಕ್ಷತ್ರಿಯವರ ಮತ್ತಿತರು ಪಾಲ್ಗೊಂಡಿದ್ದರು. ಪ್ರಧಾನ ಅಂಚೆ ಪಾಲಕ ಮಂಜುಳಾ ದೇಗಿನಾಳ ಅಧ್ಯಕ್ಷತೆ ವಹಿಸಿದ್ದರು.‌

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ