ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

KannadaprabhaNewsNetwork |  
Published : Jan 09, 2025, 12:46 AM IST
8ಕೆಎನ್ಕೆ-2ಕನಕಗಿರಿ ತಹಶೀಲ್ ಬಳಿ ವಿವಿಧ ಕೆರೆಗಳಿಗೆ ನೀರು ತುಂಬಿಸಲು ಒತ್ತಾಯಿಸಿ ರೈತರು ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.   | Kannada Prabha

ಸಾರಾಂಶ

ತಾಲೂಕಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಇಲ್ಲಿನ ತಹಸೀಲ್ದಾರ ಕಚೇರಿ ಬಳಿ ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ಕರ್ನಾಟಕ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರ ಒತ್ತಾಯ

ಕನ್ನಡಪ್ರಭ ವಾರ್ತೆ ಕನಕಗಿರಿ

ತಾಲೂಕಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಇಲ್ಲಿನ ತಹಸೀಲ್ದಾರ ಕಚೇರಿ ಬಳಿ ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಗದ್ದಿ ಮಾತನಾಡಿ, ಕನಕಗಿರಿ ತಾಲೂಕಿನ ಸಿರಿವಾರ, ಕರಡೋಣ, ಲಾಯದುಣಸಿ, ದೇವಲಾಪೂರ, ಇಂಗಳದಾಳ, ಬಸರಿಹಾಳ, ನಾಗಲಾಪೂರ ಸೇರಿದಂತೆ ನಾನಾ ಕೆರಗಳು ಬರಿದಾಗಿವೆ. ಈ ವರ್ಷ ಕೆರೆ ತುಂಬುವಷ್ಟು ಮಳೆಯಾಗದಿದ್ದರೂ ತುಂಗಭದ್ರಾ ನದಿಯಿಂದ ಯಥೇಚ್ಛವಾಗಿ ನದಿಯ ಮೂಲಕ ನೀರು ಪೋಲಾಗಿದೆ. ಇದೇ ನೀರನ್ನು ಲಕ್ಷ್ಮೀದೇವಿ ಹಾಗೂ ಕಾಟಾಪೂ ಖಾಲ್ಸಾ ಕೆರೆಗಳ ಮೂಲಕ ತಾಲೂಕಿನ ಹಲವು ಕೆರೆಗಳಿಗೆ ನೀರು ಸರಬರಾಜು ಮಾಡಬಹುದಾಗಿತ್ತು. ಆದರೆ, ಅಧಿಕಾರಿಗಳ ನಿರ್ಲಕ್ಷತನದಿಂದಾಗಿ ನೀರು ಸರಬರಾಜು ಆಗಿಲ್ಲ. ಬರುವ ಬೇಸಿಗೆಯಲ್ಲಿ ಹಲವು ಗ್ರಾಮಗಳಲ್ಲಿ, ಜನ ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗಲಿದೆ. ಕೆರೆಗಳಿಗೆ ನೀರು ತುಂಬಿಸುವುದಕ್ಕಾಗಿ ರೈತ ಸಂಘಟನೆಯಿಂದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದರು.

ನಂತರ ತಹಸೀಲ್ದಾರ ವಿಶ್ವನಾಥ ಮುರುಡಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಜ.10ರಂದು ಸಂಬಂಧಿಸಿದ ಅಧಿಕಾರಿಗಳ ಜತೆ ಸಭೆ ನಡೆಸಿ ಕೆರೆಗಳಿಗೆ ನೀರು ಸರಬರಾಜುಗೊಳಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದರಿಂದ ರೈತರು ಪ್ರತಿಭಟನೆ ಹಿಂಪಡೆದರು.

ಸಣ್ಣ ನೀರಾವರಿ ಇಲಾಖೆಯ ಸೆಲ್ಯೂ ಕುಮಾರ, ರೈತ ಮುಖಂಡರಾದ ಭೀಮನಗೌಡ ಜಿರಾಳ, ಶಿವಕುಮಾರ ಬಡಿಗೇರ, ನಿಂಗಪ್ಪ ಹುಡೇಜಾಲಿ, ಬಾಲಪ್ಪ ನಾಡಿಗೇರ, ಶಿವಣ್ಣ ಅಂಗಡಿ, ಸೋಮನಾಥ ನಾಯಕ, ಸಣ್ಣ ಶೇಖರಪ್ಪ ಗದ್ದಿ, ರಾಮಲಿಂಗಪ್ಪ ಗದ್ದಿ, ಸಣ್ಣ ಯಂಕಪ್ಪ ಗೊಲ್ಲರ, ಸಿದ್ದು ಕಾರಪುಡಿ, ಮಂಜುನಾಥ ಮುಸಲಾಪುರ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!