ಸರ್ವೆಗೆ ಬಂದ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ

KannadaprabhaNewsNetwork |  
Published : May 28, 2026, 01:15 AM IST
13. ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡುತ್ತಿರುವುದು. | Kannada Prabha

ಸಾರಾಂಶ

ಕುದೂರು: ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ ಸ್ಥಳದ ಸರ್ವೆ ಕಾರ್ಯಕ್ಕೆ ಬಂದಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತುವರಿದಾರರು ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಮಾಗಡಿ ತಾಲೂಕು ಕುದೂರು ಹೋಬಳಿ ವೀರಾಪುರ ಗ್ರಾಮದ ಚನ್ನಿಗನಪಾಳ್ಯದಲ್ಲಿ ನಡೆದಿದೆ

ಕುದೂರು: ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ ಸ್ಥಳದ ಸರ್ವೆ ಕಾರ್ಯಕ್ಕೆ ಬಂದಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತುವರಿದಾರರು ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಮಾಗಡಿ ತಾಲೂಕು ಕುದೂರು ಹೋಬಳಿ ವೀರಾಪುರ ಗ್ರಾಮದ ಚನ್ನಿಗನಪಾಳ್ಯದಲ್ಲಿ ನಡೆದಿದೆ.

ಉಡುಕುಂಟೆ-ವೀರಾಪುರ ಗ್ರಾಮದ ಸರ್ವೇ ನಂಬರ್ 42/1ರ ಚನ್ನಿಗನಪಾಳ್ಯದ ಸರ್ಕಾರಿ ಓಣಿಯನ್ನು ಗ್ರಾಮದ ಕೆಲವರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ಸಾರ್ವಜನಿಕರಿಗೆ ಓಡಾಡಲು ಕಷ್ಟವಾಗುತ್ತಿದೆ ಎಂದು ವೀರಾಪುರ ಗ್ರಾಮದವರು ಮಾಗಡಿ ತಹಸೀಲ್ದಾರ್ ಅವರಿಗೆ ಮನವಿ ಮಾಡಿದ್ದರು. ಇದರಂತೆ ತಹಸೀಲ್ದಾರ್ ರವರು ಸರ್ವೆಯರ್ ಮಂಜುನಾಥ್ ಮತ್ತು ಗ್ರಾಮ ಲೆಕ್ಕಾಧಿಕಾರಿ ಹೊನ್ನಪ್ಪ ಹಾಗೂ ಸಹಾಯಕ ಭರತ್ ಅವರನ್ನು ಸರ್ವೆ ಕಾರ್ಯಕ್ಕೆ ಕಳುಹಿಸಿದ್ದರು.

ಸರ್ವೆ ಕಾರ್ಯ ಮಾಡುತ್ತಿದ್ದಾಗ ಅಧಿಕಾರಿಗಳ ಮೇಲೆ ಮುಗಿಬಿದ್ದ ಒತ್ತುವರಿದಾರರಾದ ಜಯಮ್ಮ ಎಂಬುವರ ಮಕ್ಕಳಾದ ಚಂದ್ರಶೇಖರ್ ಮತ್ತು ಮೋಹನ್‌ಕುಮಾರ್ ಅವರು ಕರ್ತವ್ಯದಲ್ಲಿದ್ದ ಅಧಿಕಾರಿಗಳೊಂದಿಗೆ ಜಗಳ ಮಾಡಿ ನಂತರ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಗ್ರಾಮ ಲೆಕ್ಕಾಧಿಕಾರಿ ಹೊನ್ನಪ್ಪಗೆ ಮೂಗು, ತಲೆಗೆ ಪೆಟ್ಟಾಗಿದ್ದು, ಎಡಗಾಲಿನ ಮೂಳೆ ಮುರಿದು ತೀವ್ರ ರಕ್ತಸ್ರಾವಾಗಿದೆ, ಇವರ ಸಹಾಯಕ್ಕೆ ಬಂದ ಸಹಾಯಕ ಭರತ್ ಮೇಲೂ ಹಿಗ್ಗಾಮುಗ್ಗ ಹಲ್ಲೆ ಮಾಡಿದ್ದಾರೆ. ಸರ್ವೆಯರ್ ಮಂಜುನಾಥ್ ಗಲಾಟೆಯ ತೀವ್ರತೆಯನ್ನು ಅರಿತು ಓಡಿಹೋಗಿ ಬಚಾವ್ ಆಗಿದ್ದಾರೆ.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದವರನ್ನು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಹೊನ್ನಪ್ಪನವರು ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಲ್ಲೆ ಮಾಡಿದ ಚಂದ್ರಶೇಖರ್ ಮತ್ತು ಮೋಹನ್‌ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರ ತಾಯಿ ಜಯಮ್ಮಳ ತಲೆಮರೆಸಿಕೊಂಡಿದ್ದಾರೆ. ಇವರ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮಾಗಡಿ ತಹಸೀಲ್ದಾರ್ ರಂಜಿತ್ ಕುದೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಗಾಯಗೊಂಡವರನ್ನು ಜಿಲ್ಲಾಧಿಕಾರಿಗಳು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅಧಿಕಾರಿಗಳಿಗೆ ಧೈರ್ಯ ತುಂಬಿದ್ದು, ಹಲ್ಲೆ ಮಾಡಿದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಕೋಟ್ ................

ಇದೊಂದು ಆಘಾತಕಾರಿ ಘಟನೆ, ನಮ್ಮ ಇಲಾಖೆಯ ಅಧಿಕಾರಿಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇನ್ನು ಮುಂದೆ ಇಂತಹ ಒತ್ತುವರಿ ಕಾರ್ಯಗಳ ಸರ್ವೆಗೆ ಪೊಲೀಸರ ಸಹಾಯ ಪಡೆಯುತ್ತೇವೆ.

-ಕೆ.ಆರ್.ರಂಜಿತ್‌, ತಹಸೀಲ್ದಾರ್, ಮಾಗಡಿ

27ಕೆಆರ್ ಎಂಎನ್ 13,14.ಜೆಪಿಜಿ

13. ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡುತ್ತಿರುವುದು.14.ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊನ್ನಪ್ಪ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆ ಶಿಥಿಲ ಕೊಠಡಿಗಳ ಸಮಗ್ರ ಮಾಹಿತಿ ನೀಡಿ: ಬಿಇಒ
ಸ್ವಾಯತ್ತ ಸಂಸ್ಕೃತಿಯ ದಿಕ್ಕು ತಪ್ಪಿಸುವವರ ಬಗ್ಗೆ ಎಚ್ಚರವಿರಲಿ: ಪ್ರೊ.ಎಸ್. ನಟರಾಜ ಬೂದಾಳು