ಕೆರೆಯಲ್ಲಿ ಮುಳುಗಿ ತಂದೆ-ಮಗ ಸಾವು

KannadaprabhaNewsNetwork |  
Published : Jan 06, 2024, 02:00 AM IST
ಪೊಟೋ೫ಸಿಪಿಟಿ೬: ತಾಲೂಕಿನ ಕುರುಬರಹಳ್ಳಿ ಗ್ರಾಮದ ಕೆರೆಯಲ್ಲಿ ಮೃತ ಕಾರ್ಯಾಚರಣೆ ನಡೆಸಿ ಮೃತ ದೇಹ ಹೊರತೆಗೆದ ಅಗ್ನಿಶಾಮಕದಳದ ಸಿಬ್ಬಂದಿ. | Kannada Prabha

ಸಾರಾಂಶ

ಕನಕಪುರ: ಕುರಿ ತೊಳೆಯಲು ಹೋಗಿ ತಂದೆ-ಮಗ ಕೆರೆಯಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕನಕಪುರ: ಕುರಿ ತೊಳೆಯಲು ಹೋಗಿ ತಂದೆ-ಮಗ ಕೆರೆಯಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಜು(50), ಪ್ರಸನ್ನ(22) ಮೃತ ದುರ್ದೈವಿಗಳು. ಇವರಿಬ್ಬರು ಕುರುಬರಹಳ್ಳಿ ಗ್ರಾಮದ ಬಳಿಯ ಕೆರೆಯಲ್ಲಿ ಸಂಜೆ ಕುರಿಯ ಮೈತೊಳೆಯಲು ಹೋಗಿದ್ದಾರೆ. ಈ ವೇಳೆ ರಾಜು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ತಂದೆಯನ್ನು ಕಾಪಾಡಲು ಹೋದ ಮಗ ಸಹ ನೀರು ಪಾಲಾಗಿದ್ದಾನೆ.

ಅಪ್ಪ ಮಗ ಇಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಸಾತನೂರು ಠಾಣಾ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ನೆರವಿನಿಂದ ಇಬ್ಬರ ಮೃತ ದೇಹವನ್ನು ಹೊರ ತೆಗೆದು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.ಪೊಟೋ೫ಸಿಪಿಟಿ೬:

ಕನಕಪುರ ತಾಲೂಕಿನ ಕುರುಬರಹಳ್ಳಿ ಕೆರೆಯಲ್ಲಿ ಮೃತ ಕಾರ್ಯಾಚರಣೆ ನಡೆಸಿ ಮೃತ ದೇಹ ಹೊರತೆಗೆದ ಅಗ್ನಿಶಾಮಕ ದಳದ ಸಿಬ್ಬಂದಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ