ಅಕ್ರಮ ಸ್ಫೋಟಕ ಬಳಕೆ: ಅಪ್ಪ, ಮಗ ಬಂಧನ

KannadaprabhaNewsNetwork |  
Published : Feb 06, 2026, 02:45 AM IST
ಸಸಸಸಸ | Kannada Prabha

ಸಾರಾಂಶ

ಇಲ್ಲಿನ ಕುಕ್ಕುಂದೂರು ಗ್ರಾಮದ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಬಳ‍ಸಿ ಕಲ್ಲುಬಂಡೆ ಒಡೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ: ಇಲ್ಲಿನ ಕುಕ್ಕುಂದೂರು ಗ್ರಾಮದ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಬಳ‍ಸಿ ಕಲ್ಲುಬಂಡೆ ಒಡೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರದ ನಿವಾಸಿಗಳಾದ ಟಿ. ರವಿಚಂದ್ರ (55 ) ಹಾಗೂ ಆತನ ಮಗ ಪವನ್‌ ಕುಮಾರ್ (31) ಬಂಧಿತರು.

ಜ. 21ರಂದು ಸಂಜೆ 5 ಗಂಟೆಗೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಗಿ ಇಲ್ಲದೆ ಸ್ಫೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿದ್ದು, ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡ ಕಾರ್ಕಳ ನಗರ ಪೊಲೀಸ್ ಠಾಣೆ ಪಿಎಸ್‌ಐ ಮುರುಳೀಧರ ನಾಯ್ಕ ಹಾಗೂ ಸಿಬ್ಬಂದಿಯವರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ
ಅಕ್ರಮ ಬಾಂಗ್ಲಾದೇಶಿಯರ ಪತ್ತೆಗೆ ರಾಜ್ಯಾದ್ಯಂತ ಬೇಟೆ