ಮೊಬೈಲ್, ಟಿವಿಯಿಂದ ಗ್ರಾಮೀಣ ಕಲೆಗಳು ನಶಿಸುವ ಭೀತಿ: ಅಜ್ಜಂಪೀರ್‌ ಖಾದ್ರಿ

KannadaprabhaNewsNetwork |  
Published : Feb 23, 2025, 12:34 AM IST
ಶಿಗ್ಗಾಂವಿ ಪಟ್ಟಣದ ಎಂಪಿಎಂ ಸಂಸ್ಕೃತಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸುಗ್ಗಿ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್‌ ಖಾದ್ರಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿಗ್ಗಾಂವಿ ಪಟ್ಟಣದ ಎಂಪಿಎಂ ಸಂಸ್ಕೃತಿ ಪ್ರಾಥಮಿಕ ಶಾಲೆಯಲ್ಲಿ ಸುಗ್ಗಿ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಎಸ್. ಖಾದ್ರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಬದಲಾವಣೆ ಆಗಬೇಕು ಎಂದರು.

ಶಿಗ್ಗಾಂವಿ: ಇಂದಿನ ದಿನಮಾನಗಳಲ್ಲಿ ಮೊಬೈಲ್ ಮತ್ತು ಟಿವಿ ಹಾವಳಿಯಿಂದ ಗ್ರಾಮೀಣ ಕಲೆಗಳು ನಶಿಸಿ ಹೋಗುತ್ತಿದೆ ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಎಸ್. ಖಾದ್ರಿ ಹೇಳಿದರು.

ಪಟ್ಟಣದ ಎಂಪಿಎಂ ಸಂಸ್ಕೃತಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸುಗ್ಗಿ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಹಿರಿಯರು ಬದುಕುವ ರೀತಿಯೇ ಸಂಭ್ರಮದಿಂದ ಕೂಡಿದ್ದಾಗಿದ್ದು, ಅವರ ಉತ್ತಮವಾದ ಜೀವನ ಶೈಲಿ ನಮ್ಮ ಉತ್ತಮ ಬದುಕಿಗೆ ಮಾರ್ಗಸೂಚಿಯಾಗಿದೆ. ನಮ್ಮ ವಿದ್ಯಾರ್ಥಿಗಳಲ್ಲಿ ಬದಲಾವಣೆ ಬೇಕಾಗಿದೆ. ಮಹಾಸ್ವಾಮಿಗಳು, ರಾಜಕಾರಣಿಗಳು ಬಂದರೆ ಜನ ಸೇರುವ ಕಾಲ ಮುಗಿದಿದೆ. ವಿದ್ಯಾವಂತರನ್ನು ತಿರುಗಿ ನೋಡುವ ಕಾಲ ಬಂದಿದೆ. ಪಾಲಕರು ದೈನಂದಿನ ಜೀವನದ ಬೇಡಿಕೆಗಳನ್ನು ಕಡಿತ ಮಾಡಿಕೊಂಡು, ಮಕ್ಕಳಿಗೆ ಉತ್ತಮವಾದ ಶಿಕ್ಷಣ ಕೊಟ್ಟು ಅವರು ರಾಜ್ಯಕ್ಕಾಗಿ, ದೇಶಕ್ಕಾಗಿ ದುಡಿಯುವಂತಾಗಬೇಕು. ಬಡವರಿಗಾಗಿ ಬಡವರಿಂದ ಕಟ್ಟಿದ ಶಾಲೆಗಳು ರಾಜ್ಯದಲ್ಲಿಯೇ ಅತ್ಯುತ್ತಮ ಶಾಲೆಗಳಾಗಿ ಬೆಳೆಯಬೇಕು ಎಂದರೆ ಪಾಲಕರು, ವಿದ್ಯಾರ್ಥಿಗಳು ಶಾಲೆಗಳಿಗೆ ಆಧಾರವಾಗಿ ನಿಲ್ಲಬೇಕು ಎಂದರು.

ಬಡವರ ಶತ್ರು ಅಶುದ್ಧ ಕುಡಿಯುವ ನೀರಾಗಿದ್ದು, ಬಹುತೇಕ ಬಡಮಕ್ಕಳು ವ್ಯಾಸಂಗ ಮಾಡುತ್ತಿರುವ ಎಂಪಿಎಂ ಸಂಸ್ಕೃತಿ ಪ್ರಾಥಮಿಕ ಶಾಲೆಗೆ ಅಂದಾಜು ₹೩ ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನನ್ನ ಸ್ವಂತ ವೆಚ್ಚದಲ್ಲಿ ನಿರ್ಮಾಣ ಮಾಡಿಕೊಡುತ್ತೇನೆ. ಸಾಮಾಜಿಕ ಕಳಕಳಿಯುಳ್ಳ ಶಾಲೆಗಳನ್ನು ಸಾರ್ವಜನಿಕರು ಬೆಳೆಸಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಮಾತನಾಡಿ, ಮಕ್ಕಳಿಗೆ ಅತ್ಯುತ್ತಮ ಸಂಸ್ಕಾರ ಕೊಡುವ ಕೆಲಸ ಮನೆಯಿಂದಲೆ ಪ್ರಾರಂಭವಾಗಿ, ಶಾಲೆಗಳಲ್ಲಿ ಅವುಗಳನ್ನು ಬೆಳೆಸುವ ಕಾರ್ಯ ಆಗಬೇಕು. ಮಕ್ಕಳು ಓದುವಾಗ ಪಾಲಕರು ಟಿವಿ, ಮೊಬೈಲ್‌ಗಳನ್ನು ಬಳಸದೇ ಅವರೊಂದಿಗೆ ಜತೆಯಾಗಬೇಕು. ಇತ್ತೀಚಿನ ದಿನಗಳಲ್ಲಿ ತಂದೆಯಂದಿರು ತಮ್ಮ ದೈನಂದಿನ ವ್ಯವಹಾರ, ವೃತ್ತಿಗಳ ಹೊರೆಯಿಂದ ಮಕ್ಕಳ ಕಲಿಕೆಯಲ್ಲಿ ಆಸಕ್ತಿ ಕಳೆದುಕೊಳ್ಳುತ್ತಿರುವುದು ಕಂಡುಬರುತ್ತಿದ್ದು, ಮಕ್ಕಳ ಕಲಿಕೆಯಲ್ಲಿ ಶಿಕ್ಷಕರು, ತಾಯಂದಿರ ಪಾತ್ರದಷ್ಟೇ ಮಹತ್ವವನ್ನು ತಂದೆಯಂದಿರ ಪಾತ್ರ ಅವಶ್ಯಕವಿದೆ. ಹುಟ್ಟಿದ ಮಕ್ಕಳೆಲ್ಲರೂ ಬುದ್ಧಿವಂತರೇ ಆಗಿದ್ದು ಅವರನ್ನು ಸರಿಯಾದ ರೀತಿಯಲ್ಲಿ ಬೆಳೆಸಿ ಅವರಲ್ಲಿನ ವೈಶಿಷ್ಟ್ಯಗಳನ್ನು ಗುರುತಿಸಿ ಬೆಳಗಿಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕು ಎಂದರು.

ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಸಂಸ್ಥೆಯ ಅಧ್ಯಕ್ಷ ಮಂಜುನಾಥ ಮೊರಬದ, ಸಂಸ್ಥಾಪಕ ಕಾರ್ಯದರ್ಶಿ ದೇವರಾಜ ಸುಣಗಾರ, ಸಂಸ್ಥಾಪಕ ಸದಸ್ಯ ರಮೇಶ ಭಾವಿ, ಮುಖಂಡರಾದ ಸಂತೋಷ ಮೊರಬದ, ಮಂಜುನಾಥ ಬ್ಯಾಹಟ್ಟಿ, ಅಣ್ಣಪ್ಪ ನಡಟ್ಟಿ, ಅಣ್ಣಪ್ಪ ಲಮಾಣಿ, ಶಶಿಕಾಂತ ರಾಠೋಡ, ಬೀರೇಶ ಜಟ್ಟೆಪ್ಪನವರ, ರವಿ ಕೋಣನವರ, ಅನ್ವರ, ವಿನಯ, ಮಾಲತೇಶ ಮೊರಬದ, ಮುಖ್ಯೋಪಾಧ್ಯಾಯಿನಿ ಅನಿತಾ ಹಿರೇಮಠ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ