ಕನ್ನಡಪ್ರಭ ವಾರ್ತೆ ಹಲಗೂರು
ಕೆಂಪಯ್ಯನದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ತಿಂಗಳ ನಡೆಯುವ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿ, ಬರಪೀಡಿತ ಮಳೆ ಬಾರದ ಪ್ರದೇಶಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇಚ್ಛೆಪಟ್ಟ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟ ನೀಡಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದ್ದರಿಂದ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನ ಮಕ್ಕಳಿಗೆ ಬಿಸಿ ಊಟ ನೀಡಲಾಗುತ್ತಿದೆ ಎಂದರು.
ಮಕ್ಕಳಿಗೆ ಅನುಕೂಲವಾಗಲು ಪಠ್ಯೇತರ ಚಟುವಟಿಕೆಗಳನ್ನು ಕಲಿಸಲು ಉದ್ದೇಶಿಸಿ ಮಕ್ಕಳು ಬೇಸಿಗೆ ರಜೆಯನ್ನು ಸಂತೋಷದಿಂದ ಕಳೆಯಲು ಅನುವಾಗುವಂತೆ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.ಶಿಬಿರದಲ್ಲಿ ಯೋಗ ತರಬೇತಿ, ಸಂಗೀತ, ನೃತ್ಯ, ಪೇಂಟಿಂಗ್, ಚಿತ್ರಕಲೆ, ಜನಪದ ಗೀತೆ ಸೇರಿದಂತೆ ಇನ್ನೂ ಹಲವು ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಅದಕ್ಕಾಗಿ ಪ್ರತಿಯೊಬ್ಬರೂ ಸರ್ಕಾರಿ ಶಾಲೆಗಳಲ್ಲಿ ಉನ್ನತ ಶಿಕ್ಷಣ ದೊರಕುತ್ತಿದೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ನಿಮ್ಮ ಮಕ್ಕಳಿಗೆ ವ್ಯಾಸಂಗ ಕೊಡಿಸಿ ಎಂದು ಕರೆ ನೀಡಿದರು.
ಯುಗಾದಿ ಕವಿಗೋಷ್ಠಿ ಕಸಾಪ ಮಾಜಿ ಅಧ್ಯಕ್ಷ ಡಿ.ಸಿ.ಸ್ವಾಮಿ ಉದ್ಘಾಟನೆ
ನಂತರ ಮಾತನಾಡಿದ ಅವರು, ಮಳೆ ಇಲ್ಲದೆ ಬರ ಬಂದಿರುವ ಈ ಕಾಲದಲ್ಲಿ ಸಾಹಿತ್ಯ ಕೃಷಿಗೂ ಕೂಡ ಮಂಡ್ಯ ಜಿಲ್ಲೆಯಲ್ಲಿ ಬರ ಬಂದಂತೆ ಕಾಣುತ್ತಿದೆ. ಇತ್ತೀಚಿನ ದಿನಗಳಲ್ಲಿ ಕವಿಗಳು, ಸಾಹಿತಿಗಳು ಕಡಿಮೆಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಸಾಹಿತ್ಯ ಪರಿಷತ್ತು ಹೆಚ್ಚು ಹೆಚ್ಚಾಗಿ ಇಂತಹ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಕಿವಿಮಾತು ಹೇಳಿದರು.ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ದಸರಗುಪ್ಪೆ ಧನಂಜಯ ಮಾತನಾಡಿ, ಕಾರ್ಯಕ್ರಮದಲ್ಲಿ 17ಕ್ಕೂ ಹೆಚ್ಚು ಮಂದಿ ಕವಿಗಳು ಭಾಗವಹಿಸಿ ಯುಗಾದಿ ವಿಶೇಷತೆ, ನಾಡು, ನುಡಿ, ತಂದೆ ತಾಯಿ, ಬರ ಪರಿಸ್ಥಿತಿ ಕುರಿತು ಹಲವು ನೂತನ ಕವನಗಳನ್ನು ವಾಚಿಸಿದ್ದಾರೆ. ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುವುದು ಬಹಳ ಸಂತೋಷ ತಂದಿದೆ ಎಂದರು.