ಸಿದ್ದಾಪುರ: ತಾಲೂಕಿನ ಶೈಕ್ಷಣಿಕ ವ್ಯವಸ್ಥೆ ಉತ್ತಮವಾಗಿದ್ದು, ಇಲ್ಲಿನ ಶಿಕ್ಷಕರ ಕ್ರಿಯಾಶೀಲತೆಯಿಂದ ಇದು ಸಾಧ್ಯವಾಗಿದೆ ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಪಿ. ಬಸವರಾಜ ಹೇಳಿದರು.
ತಾಲೂಕಿನ ಹದಿನೆಂಟು ಕ್ಲಸ್ಟರ್ಗಳ ಹದಿನೆಂಟು ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಆದರ್ಶ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘ ಹಾಗೂ ಇಲಾಖೆಯ ಶೈಕ್ಷಣಿಕ ಚಟುವಟಿಕೆಗೆ ಸದಾ ಅವಕಾಶ ಹಾಗೂ ಪ್ರೋತ್ಸಾಹ ನೀಡುತ್ತಿರುವ ಶಂಕರ ಮಠದ ಧರ್ಮಾಧಿಕಾರಿ ವಿಜಯ ಹೆಗಡೆ ಅವರನ್ನು ಇಲಾಖೆ ಹಾಗೂ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಶಂಕರ ಮಠದ ಧರ್ಮದರ್ಶಿ ವಿಜಯ ಹೆಗಡೆ ದೊಡ್ಮನೆ, ಎಂ.ಕೆ. ಮೊಗೇರ, ಚೈತನ್ಯಕುಮಾರ ಕೆ.ಎಂ., ಬಾಲಚಂದ್ರ ಪಟಗಾರ, ಎಂ.ವಿ. ನಾಯ್ಕ ಸತೀಶ ಹೆಗಡೆ, ನಾಗರಾಜ ಮಡಿವಾಳ, ವಿಜಯಲಕ್ಷ್ಮಿ ಬಿ., ನಮೃತಾ ವಿ., ಬಸವರಾಜ ಕಡಪಟ್ಟಿ, ಮೇಧಾ ಹೆಗಡೆ, ಸುಜಾತಾ ಎಚ್., ಸಹನಾ ಬಿ.ಎಲ್., ವಂದನಾ ಕಲಭಾಗ, ಯಶೋದಾ ಭಟ್, ಅನ್ನಪೂರ್ಣಾ ಅಡಕೆಪಾಲ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಸತೀಶ ಹೆಗಡೆ ಸ್ವಾಗತಿಸಿದರು. ಕಾರ್ಯದರ್ಶಿ ಗುರುರಾಜ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಸಹ ಕಾರ್ಯದರ್ಶಿ ವಿಜಯಲಕ್ಷ್ಮಿ ಬಿ. ವಂದಿಸಿದರು.