ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಸಹಕಾರಿ: ಬಿ.ಎನ್. ಪುಷ್ಪ

KannadaprabhaNewsNetwork |  
Published : Feb 19, 2025, 12:48 AM IST
ಮಕ್ಕಳ ಕಲಿಕಾ ಹಬ್ಬ | Kannada Prabha

ಸಾರಾಂಶ

ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆಗಳುಳ್ಳ ಮಕ್ಕಳ ಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಪುಷ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆಗಳುಳ್ಳ ಮಕ್ಕಳ ಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಿರಿಯ ಉಪನ್ಯಾಸಕಿ ಬಿ.ಎನ್. ಪುಷ್ಪ ಹೇಳಿದರು.

ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಸೋಮವಾರಪೇಟೆ ‌ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಕ್ಲಸ್ಟರ್ ಕೇಂದ್ರದ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಫ್.ಎಲ್.ಎನ್. “ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ ಕುರಿತು ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಸಂಭ್ರಮದ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಹಾಗೂ ಅವರಲ್ಲಿ ಸಂತಸದ ಕಲಿಕೆಯೊಂದಿಗೆ ಅವರ ಪ್ರತಿಭಾನ್ವೇಷಣೆಗೆ ಸಹಕಾರಿಯಾಗಿದೆ ಎಂದರು.

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿನೂತನ ಚಟುವಟಿಕೆಗಳುಳ್ಳ ಕಲಿಕಾ ಹಬ್ಬವು ಮಕ್ಕಳ ಕಲಿಕೆಗೆ ಹೆಚ್ಚಿನ ಉತ್ತೇಜನ ನೀಡುವುದರೊಂದಿಗೆ ಅವರಲ್ಲಿ ಕಲಿಕಾ ಪ್ರೇರಣೆ ಬೆಳೆಸಲು ಸೂಕ್ತ ವೇದಿಕೆ ಒದಗಿಸುತ್ತದೆ. ಈ ಹಬ್ಬವು ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಗುಣಮಟ್ಟದ ಶಿಕ್ಷಣ ಹಾಗೂ ಮಕ್ಕಳ ಕಲಿಕಾ ಹಬ್ಬದ ಉದ್ದೇಶ ಮತ್ತು ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಮಕ್ಕಳ ಕಲಿಕಾ ಹಬ್ಬದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಸಿ.ಆರ್.ಪಿ.ಟಿ.ಈ.ವಿಶ್ವನಾಥ್ , ವಿದ್ಯಾರ್ಥಿಗಳು

ತಾವು ಕಲಿತ ಪಾಠಗಳನ್ನೇ ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ಪ್ರದರ್ಶಿಸಿದರೆ, , ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗುತ್ತದೆ. ಈ ಹಬ್ಬದಲ್ಲಿ ಮಕ್ಕಳಿಗೆ ಏಳು ವಿವಿಧ ಸ್ಪರ್ಧೆಗಳ ಮೂಲಕ ಅವರಲ್ಲಿ ಕಲಿಕಾ ಪ್ರೇರೇಪಣೆ ಬೆಳೆಸಲಾಗುತ್ತಿದೆ ಎಂದರು.

ಕುಶಾಲನಗರ ಪಿ.ಎಂ.ಶ್ರೀ ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಬಿ.ಎನ್.ಚಂದನ್ ಕುಮಾರ್, ಕಲಿಕಾ ಹಬ್ಬದಲ್ಲಿ ಮಕ್ಕಳು ಚಟುವಟಿಕೆಯೊಂದಿಗೆ ಪಾಲ್ಗೊಂಡಿರುವುದನ್ನು ಶ್ಲಾಘಿಸಿದರು.

ವಾಲ್ನೂರು- ತ್ಯಾಗತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ವಸಂತಕುಮಾರ್, ಹಬ್ಬವು ಮಕ್ಕಳಲ್ಲಿ ವ್ಯಕ್ತಿತ್ವ ಬೆಳೆಸಲು ಸಹಕಾರಿಯಾಗಿದೆ ಎಂದರು.

ಮುಳ್ಳುಸೋಗೆ ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ರಶ್ಮಿ, ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್. ಭಾಗ್ಯ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಎಚ್.ಎಸ್.ಉಮಾದೇವಿ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ, ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಾದ ಎಸ್.ಕೆ.ಜಲಜಾಕ್ಷಿ, ಎಂ.ಎಂ. ಭಾರತಿ, ಸಾಕಮ್ಮ, ಲಕ್ಷ್ಮಿ, ಶಾಂತಲಾ, ವಿವಿಧ ಶಾಲೆಯ ಶಿಕ್ಷಕರು, ಪೋಷಕರು, ಪಾಲ್ಗೊಂಡಿದ್ದರು.

ಶಿಕ್ಷಕಿ ಪಿ.ಆರ್.ದಿವ್ಯ ಸ್ವಾಗತಿಸಿದರು. ಶಿಕ್ಷಕಿ ಎಂ.ಬಿ. ಜಾನಕಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!