ಕನ್ನಡಪ್ರಭ ವಾರ್ತೆ ನಾಪೋಕ್ಲು
ವನಜಾಕ್ಷಿ ರೇಣುಕೇಶ್ ಹೇಳಿದರು.
ಇಲ್ಲಿನ ನಾಲ್ಕು ನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 33ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಾಡಿನಾದ್ಯಂತ ಆಯುಧ ಪೂಜೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಇತಿಹಾಸವಿದೆ. ವಾಹನ ಚಾಲಕರ ಸಂಘದಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಅದ್ಧೂರಿಯಾಗಿ ಆಯುಧಪೂಜೆ ಸಮಾರಂಭ ನಡೆಯಲಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಾಲ್ಕು ನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ ಸುಕುಮಾರ್ ಮಾತನಾಡಿ, ಸಂಘದ ವತಿಯಿಂದ ಆಯೋಜಿಸಲಾದ ಆಯುಧ ಪೂಜಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಸದಸ್ಯರು, ನಾಡಿನ ಸಾರ್ವಜನಿಕರು ಸಹಕರಿಸಿದ್ದಾರೆ. ಮುಂದೆಯೂ ಇಂತಹ ಸಹಕಾರವನ್ನು ನೀಡುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಸರ್ವ ರೀತಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭ ವೇದಿಕೆಯಲ್ಲಿ ಅತಿಥಿಗಳಾಗಿ ಗ್ಯಾರಂಟಿ ಅನುಷ್ಠಾನ ಯೋಜನೆಯ ಜಿಲ್ಲಾ ಉಪಾಧ್ಯಕ್ಷ ಬೊಳ್ಳಂಡ ಗಿರೀಶ್, ಜಯ ಕಾಫಿ ಕ್ಯೂರಿಂಗ್ ವರ್ಕ್ಸ್ನ , ಡಿ.ರೋ ಹೋಟೆಲ್ ಮಾಲೀಕ ಮಂಡಿರ ಕಿಶೋರ್ ತಮ್ಮಯ್ಯ, ಉದ್ಯಮಿ ಕಂಗಣ್ಣ ಅರುಣ್ ಮಂದಣ್ಣ, ಕರ್ನಾಟಕ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮನ್ಸೂರ್ ಆಲಿ, ಬೆನಕ ಕಾಫಿ ಟ್ರೇಡರ್ಸ್ ಮಾಲೀಕ ಚೆಯಕಪೂವಂಡ ಸತೀಶ್ ದೇವಯ್ಯ, ವಾಹನ ಚಾಲಕರ ಸಂಘದ ಮಾಜಿ ಅಧ್ಯಕ್ಷರಾದ ಬಿ.ಆರ್ ವಸಂತ, ವಾಹನ ಚಾಲಕರ ಸಂಘದ ಗೌರವಾಧ್ಯಕ್ಷ ಅಬ್ದುಲ್ ರಜಾಕ್ (ಗುಂಡು) , ಕೆ ಡಿ ಪಿ ಸದಸ್ಯ ಕಲಿಯಂಡ ಕೌಶಿ ಉಪಸ್ಥಿತರಿದ್ದರು. ಮೆರವಣಿಗೆ ಉದ್ಘಾಟನೆ :
ವಿವಿಧ ವಿಭಾಗಗಳಲ್ಲಿ ವಿಜೇತರಾದ ಅಲಂಕೃತ ವಾಹನಗಳ ಚಾಲಕರಿಗೆ ಗಣ್ಯರು ಟ್ರೋಫಿ ಹಾಗೂ ಬಹುಮಾನಗಳನ್ನು ವಿತರಿಸಿದರು.ವಿಜೇತರು: ದ್ವಿಚಕ್ರವಾಹನ: ಪ್ರಥಮ ಕೆಎ 03ಜೆ 0491, ದ್ವಿತೀಯ ಕೆಎ 12 ವಿ 6319, ತೃತಿಯ ಕೆಎ 12 ಎನ್ 1472, ತ್ರಿ ಚಕ್ರವಾಹನ ಪ್ರಥಮ ಕೆಎ 12 0799, ದ್ವಿತೀಯ 7978, ತೃತೀಯ ಕೆಎ 12 ಸಿ 0753,
ಉತ್ತಮ ಸೇವೆ ಸಲ್ಲಿಸಿದಂತಹ ಆಟೋ ಚಾಲಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು . ಉಸ್ಮಾನ್ ಸ್ವಾಗತಿಸಿದರು. ಬಿದ್ದಾಟಂಡ ಮಮತಾ ಚಿಣ್ಣಪ್ಪ ಕಾರ್ಯಕ್ರಮ ನಿರೂಪಿಸಿ ಸಂಘದ ಅಧ್ಯಕ್ಷ ಟಿ.ಪಿ ಸುಕುಮಾರ್ ವಂದಿಸಿದರು. ಬಳಿಕ ಭದ್ರಾವತಿ ಬ್ರದರ್ಸ್ ಸೌಂಡ್ಸ್ ಲೈಟಿಂಗ್ಸ್ ಮತ್ತು ಇವೆಂಟ್ಸ್ ವತಿಯಿಂದ ಕಾರ್ಯಕ್ರಮ ದಲ್ಲಿದ್ದ ಪ್ರೇಕ್ಷಕರನ್ನು ರಂಜಿಸಿತು.