ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ ಸಂಪನ್ನ

KannadaprabhaNewsNetwork |  
Published : Dec 26, 2024, 01:02 AM IST
25ಹಬ್ಬ | Kannada Prabha

ಸಾರಾಂಶ

ಕ್ರಿಸ್ಮಸ್ ಹಿನ್ನೆಯಲ್ಲಿ ಕ್ರೈಸ್ತ ಬಾಂಧವರ ಮನೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಮಾಂಸಾಹಾರ ಭಕ್ಷ್ಯಗಳೊಂದಿಗೆ ವಿವಿಧ ಖಾಧ್ಯಗಳನ್ನು ತಯಾರಿಸಿ ನೆರೆ ಹೊರೆಯವರು, ಸ್ನೇಹಿತರು ಬಂಧುಗಳು ಹಬ್ಬದ ಅಡುಗೆಯನ್ನು ಸವಿದರು.

ಕನ್ನಡಪ್ರಭ ವಾರ್ತೆ ಉಡುಪಿ ಉಡುಪಿ ಜಿಲ್ಲೆಯ ವಿವಿಧೆಡೆ ಕ್ರೈಸ್ತ ಬಾಂಧವರು ಬುಧವಾರ ಸಡಗರ ಸಂಭ್ರಮದಿಂದ ಯೇಸು ಕ್ರಿಸ್ತನ ಜನ್ಮದಿನಾಚರಣೆಯ ಅಂಗವಾಗಿ ಕ್ರಿಸ್ಮಸ್ ಹಬ್ಬ ಆಚರಿಸಿದರು.

ಕ್ರೈಸ್ತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಮಂಗಳವಾರ ರಾತ್ರಿ ನಡೆದ ಹಬ್ಬದ ವಿಶೇಷ ಬಲಿಪೂಜೆ ಹಾಗೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಉಡುಪಿ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಮಂಗಳವಾರ ರಾತ್ರಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಹಬ್ಬದ ವಿಶೇಷ ಬಲಿಪೂಜೆಯನ್ನು ಅರ್ಪಿಸಿದರೆ ಬುಧವಾರ ಬಿಷಪ್ ಹೌಸ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಉಡುಪಿ ಶೋಕಮಾತಾ ಚರ್ಚಿನಲ್ಲಿ ಧರ್ಮಗುರು ವಂ. ಚಾರ್ಲ್ಸ್ ಮಿನೇಜಸ್ ಹಾಗೂ ವಂ. ವಿಜಯ್ ಡಿಸೋಜಾ ನೇತೃತ್ವದಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ನಡೆಯಿತು. ಈ ವೇಳೆ ಚರ್ಚಿನ ಸಹಾಯಕ ಧರ್ಮಗುರು ವಂ. ಲಿಯೋ, ನಿವೃತ್ತ ಧರ್ಮಗುರು ವಂ. ವಿಲಿಯಂ ಮಾರ್ಟಿಸ್ ಉಪಸ್ಥಿತರಿದ್ದರು. ಗೋದಲಿಯಲ್ಲಿ ಬಾಲ ಯೇಸು ಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗುಳದ ಮೂಲಕ ಭಕ್ತರು ಯೇಸು ಸ್ವಾಮಿಯ ಆರಾಧನೆಯನ್ನು ಮಾಡಿದರು.

ಹಬ್ಬದ ಹಿನ್ನೆಲೆಯಲ್ಲಿ ಎಲ್ಲ ಚರ್ಚುಗಳಲ್ಲಿ ಭಕ್ತರಿಂದ ತುಂಬಿ ಹೋಗಿದ್ದು ಹಲವು ಕಡೆಗಳಲ್ಲಿ ಭಕ್ತರ ಅನೂಕೂಲತೆಗಾಗಿ ತೆರೆದ ಮೈದಾನದಲ್ಲಿ ಬೃಹತ್ ವೇದಿಕೆಯಲ್ಲಿ ಬಲಿಪೂಜೆಗೆ ವ್ಯವಸ್ಥೆ ಮಾಡಲಾಗಿತ್ತು.

ನಗರದ ಸಿಎಸ್ಐ ಚರ್ಚು, ಯುಬಿಎಂ ಚರ್ಚುಗಳಲ್ಲಿ ಸಹ ಕ್ರಿಸ್ಮಸ್ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಕ್ರಿಸ್ಮಸ್ ಹಿನ್ನೆಯಲ್ಲಿ ಕ್ರೈಸ್ತ ಬಾಂಧವರ ಮನೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಮಾಂಸಾಹಾರ ಭಕ್ಷ್ಯಗಳೊಂದಿಗೆ ವಿವಿಧ ಖಾಧ್ಯಗಳನ್ನು ತಯಾರಿಸಿ ನೆರೆ ಹೊರೆಯವರು, ಸ್ನೇಹಿತರು ಬಂಧುಗಳು ಹಬ್ಬದ ಅಡುಗೆಯನ್ನು ಸವಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ರೋಮನ್ ಕಥೊಲಿಕ್ ಹಾಗೂ ಸಿಎಸ್ಐ, ಪ್ರೊಟೆಸ್ಟೆಂಟ್ ಚರ್ಚುಗಳಿಗೆ ತೆರಳಿ ಹಬ್ಬದ ಶುಭಾಶಯ ಕೋರಿದರು.

PREV

Recommended Stories

ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ