ಸಂಭ್ರಮದ ಹನುಮ ಜಯಂತಿ ಆಚರಣೆ

KannadaprabhaNewsNetwork |  
Published : Apr 03, 2026, 02:15 AM IST
ಗದಗ ಎಪಿಎಂಸಿ ಹತ್ತಿರದ ಶ್ರೀ ಮಾರುತಿ ದೇವಸ್ಥಾನದಲ್ಲಿ ಗುರುವಾರ ಹನುಮ ಜಯಂತಿ ಅಂಗವಾಗಿ ಬಾಲ ಹನುಮನ ತೊಟ್ಟಿಲೋತ್ಸವ ಜರುಗಿತು. | Kannada Prabha

ಸಾರಾಂಶ

ದೇವಸ್ಥಾನಗಳಲ್ಲಿ ಹನುಮ ದೇವರಿಗೆ ವಿಶೇಷ ಹೂವಿನ ಅಲಂಕಾರ, ವಿಧಿವಿಧಾನಗಳೊಂದಿಗೆ ಶಾಸ್ತ್ರೋಕ್ತವಾಗಿ ವಿಶೇಷ ಪೂಜೆ, ಅಭಿಷೇಕ, ಅಷ್ಟೋತ್ತರ ನಾಮವಳಿ‌ಗಳು ನೆರವೇರಿದವು.

ಗದಗ: ನಗರ ಸೇರಿದಂತೆ ಜಿಲ್ಲಾದ್ಯಂತ ಗುರುವಾರ ಹನುಮನ ದೇವಸ್ಥಾನದಲ್ಲಿ ಹನುಮ ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ನಗರದ ಮಾರುತಿ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ಭಕ್ತರು ತೆರಳಿ ದೇವಸ್ಥಾನದಲ್ಲಿ ನಡೆದ ಬಾಲ ಹನುಮನ ತೊಟ್ಟಿಲೋತ್ಸವ ಕಾರ್ಯಕ್ರಮದಲ್ಲಿ ಶ್ರದ್ಧಾ- ಭಕ್ತಿಯಿಂದ ಭಾಗವಹಿಸಿ, ಹನುಮ ದೇವರ ಕೃಪೆಗೆ ಪಾತ್ರರಾದರು. ದೇವಸ್ಥಾನಗಳಲ್ಲಿ ಹನುಮ ದೇವರಿಗೆ ವಿಶೇಷ ಹೂವಿನ ಅಲಂಕಾರ, ವಿಧಿವಿಧಾನಗಳೊಂದಿಗೆ ಶಾಸ್ತ್ರೋಕ್ತವಾಗಿ ವಿಶೇಷ ಪೂಜೆ, ಅಭಿಷೇಕ, ಅಷ್ಟೋತ್ತರ ನಾಮವಳಿ‌ಗಳು ನೆರವೇರಿದವು.

ನಗರದ ಪ್ರಧಾನ ಅಂಚೆ ಕಚೇರಿ ಆವರಣದ ಆಂಜನೇಯ ದೇವಸ್ಥಾನದಲ್ಲಿ ಬೆಳಗ್ಗೆ ಅಂಚೆ ಮನರಂಜನಾ ಕೂಟದ ಪದಾಧಿಕಾರಿಗಳು ವಿವಿಧ ಹೂವು, ಹಾರ, ತಳಿರು ದೇವಸ್ಥಾನವನ್ನು ತೋರಣಗಳಿಂದ ಸಿಂಗರಿಸಿ ಹನುಮ ಜಯಂತಿ ಆಚರಿಸಿದರು.ವೆಂಕಟೇಶ ಕುಲಕರ್ಣಿ ಅವರ ನೇತೃತ್ವದಲ್ಲಿ ಪಂಚಾಮೃತದೊಂದಿಗೆ ಅಭಿಷೇಕಗೈದು, ಅಷ್ಟೋತ್ತರ ನಾಮಾವಳಿ‌ ಸಹಿತ ಎಲ್ಲ ವಿಧಿವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದರು. ನಂತರ ಮಹಿಳೆಯರೆಲ್ಲ ಸೇರಿ ಬಾಲ ಹನುಮನ ಕುರಿತಾದ ಭಕ್ತಿಗೀತೆಗಳ ಗಾಯನದ ಮೂಲಕ ತೊಟ್ಟಿಲೋತ್ಸವ ನೆರವೇರಿಸಿದರು. ನಂತರ ಅಭಿಷೇಕ, ಪಾನಕ, ಕೋಸಂಬರಿ ವಿತರಣೆ ಕಾರ್ಯಕ್ರಮ ಜರುಗಿತು. ನಂತರ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಈ ವೇಳೆ ಮನರಂಜನಾ ಕೂಟದ ಸದಸ್ಯರಾದ ಡಿ.ಜಿ. ಮ್ಯಾಗೇರಿ, ವಿ.ಎಂ. ಅಂಗಡಿ, ಮುತ್ತಣ್ಣ ಆನೆಗುಂದಿ, ಮನೋಹರ ಕಡಿಯವರ, ಬಸವರಾಜ ಶೇಡದ, ಸವಿತಾ ಗುಡ್ಡದ, ವಾಣಿಶ್ರೀ ಜೋಷಿ, ಎಸ್.ವಿ. ಹಿರೇಮಠ, ಮಂಜುಳಾ ಕಡ್ಡಿವರ, ಶರಣಪ್ಪ ಬೆನಾಳ, ಸೂರಪ್ಪ ಎಚ್., ವಾಣಿ ಮಾಂಡ್ರೆ, ನೀಲಮ್ಮ ದಿಬ್ಬದಮನಿ, ವಿದ್ಯಾ ಗದಗ, ಯಂಕಪ್ಪ ಗುಗ್ಗರಿ, ಶಿವಕುಮಾರ ಸುಳ್ಳದ, ಈರಣ್ಣ ವಾಲ್ಮೀಕಿ, ರಾಮಚಂದ್ರ ದೇಶಪಾಂಡೆ, ಬಸವರಾಜ ಮೊರಬದ ಮತ್ತಿತರರು ಇದ್ದರು. 5ರಂದು ಡಾ. ಬಾಬು ಜಗಜೀವನರಾಂ ಜಯಂತಿ

ಗದಗ: ಡಾ. ಬಾಬು ಜಗಜೀವನರಾಂ 119ನೇ ಜಯಂತಿ ಕಾರ್ಯಕ್ರಮ ಏ. 5ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ನಡೆಯಲಿದೆ.ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ತಾಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತ ವರ್ಗ ಮತ್ತು ಎಲ್ಲ ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಸದಸ್ಯರು ಹಾಗೂ ಸಮಾಜದ ಮುಖಂಡರು ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಪ್ತು ಸ್ಥಗಿತ, ಗಿಡದಲ್ಲಿಯೇ ಕೊಳೆಯುತ್ತಿರುವ ಪಪ್ಪಾಯಿ ಹಣ್ಣು!
ಸನಾತನ ಧರ್ಮ ಜಗತ್ತಿಗೆ ಬೆಳಕು ನೀಡುವ ಧರ್ಮ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ