ಮುಂಡಗೋಡ: ತಾಲೂಕಿನ ಮಳಗಿ ಗ್ರಾಮ ದೇವತೆ ಮಾರಿಕಾಂಬಾ ದೇವಿಯ ೨೮ನೇ ಜಾತ್ರಾ ಮಹೋತ್ಸವಕ್ಕೆ ಶಾಸ್ತ್ರೋತ್ತರವಾಗಿ ಚಾಲನೆ ದೊರೆತಿದ್ದು, ಬುಧವಾರ ಭಾರೀ ಜನಸ್ತೋಮದೊಂದಿಗೆ ದೇವಿಯ ರಥೋತ್ಸವ ಅದ್ಧೂರಿಯಾಗಿ ಜರುಗಿತು.
ಮಾರ್ಗದುದ್ದಕ್ಕೂ ಸಹಸ್ರ ಭಕ್ತರು ರಥದ ಮೇಲೆ ಬಾಳೆಹಣ್ಣು, ಉತ್ತುತ್ತಿ, ದವಸ ಧಾನ್ಯ ಸೇರಿದಂತೆ ವಿವಿಧ ಹಣ್ಣು ಹಂಪಲು ಎಸೆದು ಭಕ್ತಿ ಸಮರ್ಪಿಸಿದರು. ಕೆಲ ಭಕ್ತರು ಕೋಳಿ ಮರಿಗಳನ್ನು ರಥದ ಮೇಲೆ ತೂರಿ ತಮ್ಮ ಹರಕೆ ತೀರಿಸಿದರು. ರಥ ಬೀದಿಯುದ್ದಕ್ಕೂ ಸಾಮಾಜಿಕ ಕಾರ್ಯಕರ್ತರಿಂದ ಶರಬತ್, ಮಜ್ಜಿಗೆ, ಕುಡಿಯುವ ನೀರು ಸೇರಿದಂತೆ ವಿವಿಧ ಪಾನೀಯಗಳನ್ನು ಭಕ್ತರಿಗೆ ಪೂರೈಕೆ ಮಾಡಲಾಯಿತು. ಪುರುಷರು ಮಹಿಳೆಯರು ವೃದ್ಧರು, ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥ ಬೀದಿ ಎಂಬುದು ಜನಜಂಗುಳಿಯಿಂದ ಕೂಡಿತ್ತು.
ಮಧ್ಯಾಹ್ನ ೨ ಗಂಟೆಗೆ ಚೌತ ಮನೆ ಪ್ರವೇಶಿಸಿದ ರಥೋತ್ಸವ ಮೆರವಣಿಗೆ ದೇವಿಗೆ ಸೇವಾ ರೂಪದಲ್ಲಿ ಬಂದಂತಹ ಸೀರೆ ಮುಂತಾದ ವಸ್ತುಗಳ ಹರಾಜು ಪ್ರಕ್ರಿಯೆ ನಡೆಯಿತು. ಬಳಿಕ ಧಾರ್ಮಿಕ ಪೂಜಾ ವಿಧಿ ವಿಧಾನದೊಂದಿಗೆ ಜಾತ್ರಾ ಗದ್ದುಗೆಯಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು.ಮಾಂಗಲ್ಯ ಧಾರಣೆ: