ಬೆಳಕಿನ ಹಬ್ಬ ದೀಪಾವಳಿಗೆ ಸಂಭ್ರಮದ ತಯಾರಿ

KannadaprabhaNewsNetwork |  
Published : Oct 21, 2025, 01:00 AM IST
ಮಳೆಯ ನಡುವೆಯೂ  ಬೆಳಕಿನ ಹಬ್ಬ ದೀಪಾವಳಿಗೆ ಸಂಭ್ರಮದ ತಯಾರಿ | Kannada Prabha

ಸಾರಾಂಶ

ದೀಪಾವಳಿಯನ್ನು ಮೂರು ದಿನಗಳ ಸಡಗರ ಸಂಭ್ರಮದಿಂದ ಆಚರಿಸಲು ಜಿಲ್ಲೆಯಾದ್ಯಂತ ಜನರು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಸೋಮವಾರ ರಾತ್ರಿಯಿಂದ ಬೆಳಕಿನ ಹಬ್ಬ ದೀಪಾವಳಿ ಪ್ರಾರಂಭವಾಗಲಿದ್ದು ಇದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ಸಾಮಗ್ರಿಗಳನ್ನು ಖರೀದಿಸುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂದಿತು.

ಚಾ.ನಗರದಲ್ಲಿ ಪಟಾಕಿ, ಪೂಜಾ ಸಾಮಗ್ರಿಗಳ ವ್ಯಾಪಾರ ಬಲು ಜೋರು

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ದೀಪಾವಳಿಯನ್ನು ಮೂರು ದಿನಗಳ ಸಡಗರ ಸಂಭ್ರಮದಿಂದ ಆಚರಿಸಲು ಜಿಲ್ಲೆಯಾದ್ಯಂತ ಜನರು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಸೋಮವಾರ ರಾತ್ರಿಯಿಂದ ಬೆಳಕಿನ ಹಬ್ಬ ದೀಪಾವಳಿ ಪ್ರಾರಂಭವಾಗಲಿದ್ದು ಇದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ಸಾಮಗ್ರಿಗಳನ್ನು ಖರೀದಿಸುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂದಿತು.

ಈ ಸಂಭ್ರಮದ ದೀಪಾವಳಿ ಆಚರಣೆ ನಡುವೆ ಮಳೆರಾಯ ಅಗಮಿಸಿದ್ದು ಮಕ್ಕಳು ಬಹಳ ಖುಷಿಯಿಂದ ತಮ್ಮ ಪೋಷಕರ ಜೊತೆ ಪಟಾಕಿ ಅಂಗಡಿಗಳಿಗೆ ಬಂದು ಪಟಾಕಿಗಳನ್ನು ಖರೀದಿಸುತ್ತಿದ್ದರು.

ದೀಪಾವಳಿ ದೊಡ್ಡ ಮತ್ತು ಭವ್ಯವಾದ ಹಬ್ಬಗಳಲ್ಲಿ ಒಂದಾಗಿದೆ. ದೀಪಾವಳಿಯು ಸಂತೋಷ, ದೀಪಾವಳಿ ಎಂದರೆ ಬೆಳಕಿನ ಹಬ್ಬ ವಿಜಯ ಮತ್ತು ಸಾಮರಸ್ಯವನ್ನು ಗುರುತಿಸಲು ಸ್ಮರಿಸುವ ಹಬ್ಬವಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಸಂಪತ್ತು ಮತ್ತು ಸಮೃದ್ಧಿಗಾಗಿ ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆ.

ಪಟಾಕಿ ವ್ಯಾಪಾರ ಬಲು ಜೋರು:

ಜಿಲ್ಲಾ ಕೇಂದ್ರ ಚಾಮರಾಜನಗರದ ಮೆಘಾ ಕಾಂಪ್ಲೆಕ್ಸ್ ಬಳಿ ಪಟಾಕಿ ಅಂಗಡಿಗಳು ಹಾಗೂ ಅಂಗಡಿ ಬೀದಿಗಳಲ್ಲಿ ವ್ಯಾಪಾರದ ಭರಾಟೆ ಜೋರಾಗಿಯೇ ಇತ್ತು, ಅದರಲ್ಲೂ ಮೆಘಾ ಕಾಂಪ್ಲೆಕ್ಸ್ ಪಕ್ಕದ ಮೈದಾನದಲ್ಲಿ ತೆರೆದಿರುವ ಪಟಾಕಿ ಅಂಗಡಿಗಳ ಮುಂದೆ ವ್ಯಾಪಾರದ ಭರಾಟೆ ಬಲು ಜೋರಾಗಿಯೇ ಇತ್ತು.

ಹೂವು, ಬಾಳೆಹಣ್ಣು, ಅಲಂಕಾರಿಕ ವಸ್ತುಗಳು ಸೇರಿದಂತೆ ಪೂಜಾ ಸಾಮಗ್ರಿಗಳ ಬೆಲೆ ಗಗನಕ್ಕೇರಿ ಬೆಲೆ ಏರಿಕೆ ಬಿಸಿ ತಟ್ಟುತ್ತಿದ್ದರೂ, ಸಡಗರದ ದೀಪಾವಳಿಗೆ ಜನರು ವಸ್ತುಗಳನ್ನು ಹಾಗೂ ಮಣ್ಣಿನ ಹಣತೆ ದೀಪಗಳನ್ನು ಖರೀದಿಸುತ್ತಿದ್ದದು ಮಾರುಕಟ್ಟೆಯಲ್ಲಿ ಕಂಡುಬಂತು.

ಸೋಮವಾರ ಬೆಳಗ್ಗೆಯಿಂದಲೇ ವಸ್ತುಗಳನ್ನು ಖರೀದಿಸಲು ನಗರದ ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಹಳೆ ಖಾಸಗಿ ಬಸ್ ನಿಲ್ದಾಣದ ಅಂಗಡಿಗಳು, ಪಟಾಕಿ ಅಂಗಡಿಗಳಿಗೆ ಮುಗಿಬಿದ್ದರು.

ರಾಜಸ್ತಾನಿ ಭಾಂದವರಿಗೆ, ಚಿನ್ನ ಮತ್ತು ಬೆಳ್ಳಿ ವ್ಯಾಪಾರಗಾರರಿಗೆ ದೀಪಾವಳಿ ದೊಡ್ಡ ಹಬ್ಬ ಅದಕ್ಕಾಗಿ ತಮ್ಮ ಅಂಗಡಿ ಮಳಿಗೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ, ಪೂಜೆ ನೆರವೇರಿಸಿ, ತಮ್ಮ ಗ್ರಾಹಕರಿಗೆ ಸಿಹಿ ವಿತರಿಸುತ್ತಿದ್ದರು.

ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರನ ದೀಪಾವಳಿ ಜಾತ್ರೆ ಮತ್ತು ಮಹಾ ರಥೋತ್ಸವ ನಡೆಯುತ್ತಿರುವುದರಿಂದ ಭಕ್ತರು ತಂಡೋಪ ತಂಡವಾಗಿ ಮಹದೇಶ್ವರನ ಬೆಟ್ಟಕ್ಕೆ ತೆರಳುತ್ತಿದ್ದರು.

೨೦ಸಿಎಚ್‌ಎನ್ ೧ ಮತ್ತು ೨ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಚಾಮರಾಜನಗರದಲ್ಲಿ ತೆರೆದಿರುವ ಪಟಾಕಿ ಅಂಗಡಿಗಳ ಮುಂದೆ ಜನರು ತಮ್ಮ ಮಕ್ಕಳೊಂದಿಗೆ ಪಟಾಕಿಗಳ ಖರೀದಿಯಲ್ಲಿ ತೊಡಗಿರುವುದು.-----೨೦ ಸಿಎಚ್‌ಎನ್ ೩ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಚಾಮರಾಜನಗರದ ಅಂಗಡಿ ಬೀದಿಗಳಲ್ಲಿ ಅಗತ್ಯ ವಸ್ತುಗಳನ್ನು ಕೊಳ್ಳುತ್ತಿರುವ ಜನರು------೨೦ಸಿಎಚ್‌ಎನ್೪ದೀಪಾವಳಿ ಹಬ್ಬದ ಪ್ರಯುಕ್ತ ಮಣ್ಣಿನ ಹಣತೆ ಖರೀದಿಸುತ್ತಿರುವುದು----------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ಸಿಎಂ ಆದರೆ ನನಗೆ ಸಚಿವ ಸ್ಥಾನವೇ ಬೇಡ : ರಾಜಣ್ಣ
ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌