-ಮಲೆನಾಡ ರೈತ ಕುುಟಂಬಗಳಿಗೆ ಪುನರ್ವಸತಿ ಕಲ್ಪಿಸಲು ಒತ್ತಾಯ-ಕುಲಾಂತರಿ ಬೀಜಕ್ಕೆ ರಾಜ್ಯದಲ್ಲಿ ಸರ್ಕಾರ ಅನುಮತಿ ನೀಡಬಾರದು
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಸಮರ್ಥ ಹೋರಾಟ ನಡೆಸಲು ಯುವ ಪಡೆಗೂ ಹೆಚ್ಚು ಗಮನ ನೀಡಿ, ಸಂಘಕ್ಕೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ಮಾಡಲಾಗಿದೆ ಎಂದರು.
ರಾಜ್ಯದ 192 ತಾಲೂಕುಗಳಲ್ಲಿ ಕಳೆದ ವರ್ಷ ತೀವ್ರ ಬರ ಆವರಿಸಿತ್ತು. ಆಗ ರಾಜ್ಯ ಸರ್ಕಾರ ಸಮರ್ಪಕವಾಗಿ ಪರಿಹಾರ ಕಾರ್ಯ ಕೈಗೊಳ್ಳಲಿಲ್ಲ, ರೈತರಿಗೆ ಪರಿಹಾರವನ್ನೂ ನೀಡಲಿಲ್ಲ. ಈಗ ಅತಿವೃಷ್ಟಯಿಂದ ಆಗಿರುವ ಬೆಳೆಗಳ ಹಾನಿ ಪರಿಹಾರ ನೀಡಲು ವಿಳಂಬ ಮಾಡಬಾರದು ಎಂದರು.ಸಂಘದ ರಾಜ್ಯಾಧ್ಯಕ್ಷ ಬಡಗಲಪುರದ ನಾಗೇಂದ್ರ ಮಾತನಾಡಿ, ರಾಜ್ಯದಲ್ಲಿ ಕುಲಾಂತರಿ ಬೀಜಗಳಿಗೆ ಸರ್ಕಾರ ಅನುಮತಿ ನೀಡಬಾರದು. ಭೂ ಸುದಾರಣೆ ಕಾಯ್ದೆ ಸರ್ಕಾರ ರದ್ದುಪಡಿಸಬೇಕು. ವಿದ್ಯುತ್ ನೀತಿ ಜಾರಿಗೆ ತರಬಾರದು. ಯಾವುದೇ ರೀತಿಯ ಪುನರ್ವಸತಿ ಹಾಗೂ ಪರ್ಯಾಯ ಭೂಮಿ ಸಾಗುವಳಿ ಹಕ್ಕುಪತ್ರ ನೀಡಿಲ್ಲ. ಅಂತಹ ರೈತರ ನೆರವಿಗೆ ಸರ್ಕಾರ ಧಾವಿಸಲಿ ಎಂದ ಅವರು, ಈಗಿನ ಅರಣ್ಯ ಮಂತ್ರಿ ಈಶ್ವರ ಖಂಡ್ರೆ ಅರಣ್ಯ ಇಲಾಖೆಯಿಂದ ರೈತರನ್ನು ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ ಎಂದು ಟೀಕಿಸಿದರು.
- - -