ಸರ್ಕಾರದ ಕಾರ್ಮಿಕ ನೀತಿಗಳ ವಿರುದ್ಧ ಹೋರಾಟ

KannadaprabhaNewsNetwork |  
Published : Oct 27, 2025, 12:00 AM IST
೨೬ಕೆಎಲ್‌ಆರ್-೧೦ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಸಿಐಟಿಯು ೭ನೇಯ ಜಿಲ್ಲಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿದರು. | Kannada Prabha

ಸಾರಾಂಶ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ೧೧ ವರ್ಷಗಳ ಅವಧಿಯಲ್ಲಿ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ ಸರ್ಕಾರಿ ಖನಿಜ ಸಂಪತ್ತನ್ನು ಖಾಸಗೀಕರಣ ಮಾಡುವುದು, ಸರ್ಕಾರಿ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಿಸುತ್ತಿದೆ. ಬಂಡವಾಳದಾರರಿಗೆ ಸ್ವಾಗತ ಕೋರಿದ್ದಾರೆ. ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಕೃಷಿ ಯೋಗ್ಯ ಫಲವತ್ತಾದ ಭೂಮಿಯನ್ನು ಬಳಸಬಾರದು.

ಕನ್ನಡಪ್ರಭ ವಾರ್ತೆ ಕೋಲಾರ ದೇಶಾದ್ಯಂತ ಕೃಷಿ ಕ್ಷೇತ್ರ ಬಿಕ್ಕಟ್ಟಿಗೆ ಸಿಲುಕಿದೆ. ಅವೈಜ್ಞಾನಿಕ ಭೂಸ್ವಾಧೀನದಿಂದಾಗಿ ಕೃಷಿ ನಂಬಿರುವ ರೈತರು ಮತ್ತು ಕೃಷಿ ಕೂಲಿಕಾರರನ್ನು ಗ್ರಾಮೀಣ ಪ್ರದೇಶದಿಂದ ಒಕ್ಕಲೆಬ್ಬಿಸಲಾಗುತ್ತಿದೆ. ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ ಇರುವ ಉದ್ಯೋಗದಲ್ಲಿಯೇ ಜೀತದಾಳುಗಳಾಗಿ ದುಡಿಯುವಂತಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಆತಂಕ ವ್ಯಕ್ತಪಡಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ಸಿಐಟಿಯು ೭ನೇಯ ಜಿಲ್ಲಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಪಾಯಕಾರಿ ಕಾರ್ಮಿಕ ನೀತಿಗಳ ವಿರುದ್ದ ಕಾರ್ಮಿಕರು ಒಂದಾಗಿ ಹೋರಾಟಕ್ಕೆ ಮುಂದಾಗಬೇಕು ಎಂದರು.

ಕೃಷಿ ಭೂಮಿ ಸ್ವಾಧೀನ ಕೈಬಿಡಲಿ

ಜಿಲ್ಲೆಯ ಅಭಿವೃದ್ಧಿಗೆ ಸೂಕ್ತ ಗಮನ ಕೊಡಲು ಸರ್ಕಾರ ಮುಂದಾಗಬೇಕು. ರಾಜಧಾನಿ ಸುತ್ತಮುತ್ತಲು ನಡೆಸುತ್ತಿರುವ ವ್ಯಾಪಕ ಭೂಸ್ವಾಧೀನ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕೃಷಿ ಭೂಮಿಯನ್ನು ಇಲ್ಲದಂತೆ ಮಾಡುತ್ತದೆ. ಕೈಗಾರಿಕೆ ಸ್ಥಾಪಿಸಲು ಕೃಷಿ ಯೋಗ್ಯ ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು ಎಂದರು.ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ೧೧ ವರ್ಷಗಳ ಅವಧಿಯಲ್ಲಿ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ ಸರ್ಕಾರಿ ಖನಿಜ ಸಂಪತ್ತನ್ನು ಖಾಸಗೀಕರಣ ಮಾಡುವುದು, ಸರ್ಕಾರಿ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಿಸುತ್ತಿದೆ. ಬಂಡವಾಳದಾರರಿಗೆ ಸ್ವಾಗತ ಕೋರಿದ್ದಾರೆ ಎಂದು ದೂರಿದರು.ಗುತ್ತಿಕೆ ಕಾರ್ಮಿಕ ಸಂಖ್ಯೆ ಹೆಚ್ಚಳ

ಭಾರತದಲ್ಲಿ ಹೈನುಗಾರಿಕೆ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳ ಮೇಲೆ ತೀವ್ರತರ ದಾಳಿ ಆರಂಭವಾಗಿ, ಇವುಗಳ ಮೇಲೆ ಅವಲಂಬಿತವಾಗಿರುವ ಗ್ರಾಮೀಣ ಉದ್ಯೋಗ ಕುಸಿದು, ನಿರುದ್ಯೋಗ ಪ್ರಮಾಣ ತೀವ್ರವಾಗಿ ಹೆಚ್ಚಳವಾಗುತ್ತಿದೆ ಎಲ್ಲಾ ಇಲಾಖೆಗಳಲ್ಲೂ ಗುತ್ತಿಗೆ ಕಾರ್ಮಿಕರ ಪ್ರಮಾಣ ಹೆಚ್ಚಳವಾಗುತ್ತಿದೆ ಕಾರ್ಪೊರೇಟ್ ಕಂಪನಿಗಳಿಗೆ ಲಾಭಹೆಚ್ಚಾಗುತ್ತಿದೆ ಇದರ ಆರ್ಥಿಕ ನೀತಿಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಬೇಕು ಎಂದರುನೂತನ ಸಮಿತಿ ಆಯ್ಕೆ:ಅಧ್ಯಕ್ಷರಾಗಿ ಪಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾಗಿ ಎಂ ವಿಜಯಕೃಷ್ಣ, ಖಜಾಂಚಿಯಾಗಿ ಹೆಚ್.ಬಿ.ಕೃಷ್ಣಪ್ಪ, ಉಪಾಧ್ಯಕ್ಷರಾಗಿ ಗಾಂಧಿನಗರ ನಾರಾಯಣಸ್ವಾಮಿ, ಅಮರನಾರಾಯಣಪ್ಪ, ಎ.ಆರ್.ಬಾಬು, ಪಿ.ಆನಂದರಾಜ್, ಅಂಜಲಮ್ಮ, ಪಿ.ತಂಗರಾಜ್, ಕಾರ್ಯದರ್ಶಿಗಳಾಗಿ ಬಿ.ಎಲ್.ಕೇಶವರಾವ್, ಎಂ.ಜಯಲಕ್ಷ್ಮಿ, ಎಂ.ಭೀಮರಾಜ್, ಶಿವಾನಂದ್, ಎಸ್.ಡಿ.ಆನಂದ್, ಲಿಯೋರಾಜ, ಐ.ಸಿ.ವೀರಭದ್ರ, ಎನ್.ಕಲ್ಪನಾ, ವಿ.ಹರೀಶ್ ಆಯ್ಕೆ ಮಾಡಲಾಯಿತು.ಸಭೆಯ ನಿರ್ಣಯಗಳು:ಸಿಐಟಿಯು ಸಮ್ಮೇಳನದಲ್ಲಿ ಹಲವು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಬಂಡವಾಳಶಾಯಿ ಪರವಾದ ಕಾರ್ಮಿಕ ನೀತಿ ಸಂಹಿತೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು. ಇಪಿಎಪ್ ನಿವೃತ್ತಿ ವೇತನವನ್ನು ಕನಿಷ್ಟ ೧೦ ಸಾವಿರಕ್ಕೆ ಏರಿಸಬೇಕು, ಚಿನ್ನದ ಗಣಿಯನ್ನು ಪುನರ್ ಆರಂಭಿಸಬೇಕು ಮತ್ತು ಪರಿಹಾರ ಹಾಗೂ ಗಣಿ ಕಾರ್ಮಿಕರು ವಾಸ ಮಾಡುವ ಮನೆಗಳನ್ನು ಗಣಿ ಕಾರ್ಮಿಕರಿಗೆ ನೀಡಬೇಕು, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು, ಕನಿಷ್ಟ ವೇತನ ೩೬ ಸಾವಿರ ನಿಗದಿ ಮಾಡಲಿ, ಗುತ್ತಿಗೆ ಕಾರ್ಮಿಕರನ್ನು ಕಾಯಂ ಮಾಡಬೇಕು ಹಾಗೂ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿ ಮಾಡುವಂತೆ ಒತ್ತಾಯಿಸಲಾಗಿದೆ.

PREV

Recommended Stories

ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ