ಕನ್ನಡಪ್ರಭ ವಾರ್ತೆ ಬೆಂಗಳೂರು
ಜೂ.7ರಂದು ಸಂಜೆ 6.30ಕ್ಕೆ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಗಳ ವಿಭಾಗದ ಬ್ಯಾರಾಕ್ ಸಂಖ್ಯೆ 3 ಮತ್ತು 4ರ ಎದುರು ಈ ಗಲಾಟೆ ನಡೆದಿದೆ. ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ಮಲ್ಲಿಕಾರ್ಜುನ್ ನೀಡಿದ ದೂರಿನ ಮೇರೆಗೆ ವಿಚಾರಣಾಧೀನ ಕೈದಿಗಳಾದ ವಿಶ್ವನಾಥ, ಮುನಿರಾಜ್, ಜಾಫರ್ ಸಾದಿಕ್, ವಿಶಾಲ್ಗೌಡ, ಟಿಪ್ಪು ಸುಲ್ತಾನ್, ಸೇಂದಿಲ್ ಕುಮಾರ್, ಅಜಯ್ ಸಿಂಗ್, ಕುಮಾರ್, ಇರ್ಷಾದ್ ಪಾಷಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಜಗಳದಲ್ಲಿ ಗಾಯಗೊಂಡಿರುವ ವಿಚಾರಣಾಧೀನ ಕೈದಿಗಳಾದ ತೇಜಸ್, ಅಮಿತ್ ಕುಮಾರ್, ಶೇಷಾದ್ರಿ, ಧನುಷ್ಗೆ ಕೇಂದ್ರ ಕಾರಾಗೃಹದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಏನಿದು ಘಟನೆ?
ಎರಡೂ ಗುಂಪುಗಳ ನಡುವೆ ಗಲಾಟೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಫ್ತಾ ವಸೂಲಿ ವಿಚಾರವಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಜೈಲಾಧಿಕಾರಿಗಳ ದೂರಿನ ಪ್ರಕಾರ ದ್ವೇಷದ ಹಿನ್ನೆಲೆಯಲ್ಲಿ ಈ ಮಾರಾಮಾರಿ ನಡೆದಿರುವ ಸಾಧ್ಯತೆಯಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.