ಹುಬ್ಬಳ್ಳಿ:
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ನಿವಾಸಿಗಳನ್ನು ಭೇಟಿಯಾಗಿ ಸಾಂತ್ವನ ಹೇಳಿರುವ ಸಚಿವ ಜಮೀರ್ ಅಹ್ಮದ್ ಖಾನ್ 24 ಗಂಟೆಗಳಲ್ಲಿ ಸಿಹಿ ಸುದ್ದಿ ದೊರೆಯಲಿದೆ ಎಂದು ಭರವಸೆ ನೀಡಿದ್ದಾರೆ. ಆದರೆ, ರಾಜ್ಯದ ಜನರ ತೆರಿಗೆ ಹಣದಿಂದ ನುಸುಳುಕೋರರಿಗೆ ಸೂರು ಕಲ್ಪಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಹಾಗೇನಾದರೂ ಆದರೆ, ನಾವು ಕೈಕಟ್ಟಿ ಕೂರುವುದಿಲ್ಲ. ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕೇಂದ್ರದ ನಾಯಕರನ್ನು ಓಲೈಸುವುದನ್ನು ಬಿಡಬೇಕು ಎಂದರು.ಹೈಕಮಾಂಡ್ ಹೇಳಿದೆ ಎಂಬ ಕಾರಣಕ್ಕೆ ಜಮೀರ್ ಇಲ್ಲಸಲ್ಲದ ಭರವಸೆ ನೀಡುತ್ತಿದ್ದಾರೆ. ಅಕ್ರಮ ವಲಸಿಗರ ಬೆನ್ನಿಗೆ ಸರ್ಕಾರ ನಿಂತಿರುವ ಬಗ್ಗೆ ಸಂಶಯವಿದೆ. ಅಕ್ರಮವಾಗಿ ಕೋಗಿಲು ಬಡಾವಣೆ ನಿರ್ಮಾಣ ಮಾಡಿದವರ ಮೇಲೆ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ರಾಜ್ಯ ಸರ್ಕಾರ ಕೇರಳದ ಪರವಾಗಿ ಕೆಲಸ ಮಾಡದೇ, ರಾಜ್ಯದ ಜನರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಮಂತ್ರಿಗಳ ಆಪ್ತರು ಈ ಡ್ರಗ್ಸ್ ಪ್ರಕರಣದಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ. ಇದು ತನಿಖೆಯಿಂದಷ್ಟೇ ಹೊರ ಬರಬೇಕಿದೆ ಎಂದ ಅವರು, ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳ ಹುದ್ದೆಯನ್ನು ಹರಾಜು ಹಾಕಲಾಗುತ್ತಿದೆ. ₹ 1.5ರಿಂದ ₹ 2 ಕೋಟಿ ನೀಡಿದವರಿಗಷ್ಟೇ ಕಾರ್ಯಾದೇಶ ನೀಡಲಾಗುತ್ತಿದೆ. ಲಂಚ ಕೊಡಲು ಹಣ ಹೊಂದಿಸುವಲ್ಲಿ ಅಲ್ಲಿನ ಪೊಲೀಸರು ಬ್ಯೂಸಿ ಆಗಿದ್ದು, ಸ್ಥಳೀಯವಾಗಿ ನಡೆಯುತ್ತಿರುವ ದಂಧೆಗಳ ಬಗ್ಗೆ ಅವರಿಗೆ ಮಾಹಿತಿಯೇ ಇಲ್ಲ ಎಂದು ಕಿಡಿಕಾರಿದರು. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು.