ಹುಲ್ಲು ಕುಯ್ಯುವ ವಿಚಾರಕ್ಕೆ ಜಗಳ: ವ್ಯಕ್ತಿಯ ಕೊಲೆ!

KannadaprabhaNewsNetwork |  
Published : Aug 07, 2024, 01:32 AM IST
ಪೊಟೋ೬ಸಿಪಿಟಿ೧: ರಂಜೀತ್ ಕುಮಾರ್. | Kannada Prabha

ಸಾರಾಂಶ

ಸೋಮವಾರ ಸಂಜೆ ಇದೇ ವಿಚಾರಕ್ಕೆ ಇವರು ಆತನನ್ನು ಮಚ್ಚಿನಿಂದ ತಲೆಗೆ ಹೊಡೆದ ಕೊಲೆ ಮಾಡಿದ್ದಾರೆ. ಜಮೀನಿನಲ್ಲಿ ಕೊಲೆ ಮಾಡಿ ಶವವನ್ನು ರಸ್ತೆ ಬದಿಗೆ ಎಳೆದು ತಂದ ಹಾಕಿದ್ದು, ತಡ ರಾತ್ರಿ ಪೊಲೀಸರ ಬಳಿ ಹೋಗಿ ಶರಣಾಗಿ ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾರೆ.

ಚನ್ನಪಟ್ಟಣ: ಹುಲ್ಲು ಕುಯ್ಯುವ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಂಜಿತ್ ಕುಮಾರ್(೨೯) ಕೊಲೆಯಾದ ಯುವಕ. ಈತನಿಗೂ ಈತನ ಚಿಕ್ಕಪ್ಪ ನಾಗರಾಜು, ಮಂಗಳಮ್ಮ ಹಾಗೂ ಅವರ ಮಗ ಸುನೀಲ್ ಎಂಬುವವರಿಗೆ ಜಮೀನಿನಲ್ಲಿ ಹುಲ್ಲು ಕುಯ್ಯುವ ವಿಚಾರಕ್ಕೆ ಜಗಳ ನಡೆದಿದೆ. ಸೋಮವಾರ ಸಂಜೆ ಇದೇ ವಿಚಾರಕ್ಕೆ ಇವರು ಆತನನ್ನು ಮಚ್ಚಿನಿಂದ ತಲೆಗೆ ಹೊಡೆದ ಕೊಲೆ ಮಾಡಿದ್ದಾರೆ. ಜಮೀನಿನಲ್ಲಿ ಕೊಲೆ ಮಾಡಿ ಶವವನ್ನು ರಸ್ತೆ ಬದಿಗೆ ಎಳೆದು ತಂದ ಹಾಕಿದ್ದು, ತಡ ರಾತ್ರಿ ಪೊಲೀಸರ ಬಳಿ ಹೋಗಿ ಶರಣಾಗಿ ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾರೆ. ಆರೋಪಿಗಳು ಪೊಲೀಸರ ವಶದಲ್ಲಿದ್ದು, ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಹಾಗೂ ಬೆರಳಚ್ಚು ತಜ್ಞರು ಕೊಲೆ ನಡೆದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ
ಶಕ್ತಿ ಯೋಜನೆ ಫಲಾನುಭವಿ ಸ್ತ್ರೀಯರಿಗೆ ಸ್ಮಾರ್ಟ್‌ಕಾರ್ಡ್‌