ವಾಲ್ಮೀಕಿ ಹಣ ವಾಪಾಸ್‌ವರೆಗೂ ಹೋರಾಟ: ಬಿವೈವಿ

KannadaprabhaNewsNetwork |  
Published : Aug 30, 2026, 01:30 AM IST
ವಿಜಯೇಂದ್ರ | Kannada Prabha

ಸಾರಾಂಶ

ವಾಲ್ಮೀಕಿ ನಿಗಮದ 187 ಕೋಟಿ ರು. ಹಣ ವಾಪಸ್ ಸರ್ಕಾರಕ್ಕೆ ಬರುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುವಾಲ್ಮೀಕಿ ನಿಗಮದ 187 ಕೋಟಿ ರು. ಹಣ ವಾಪಸ್ ಸರ್ಕಾರಕ್ಕೆ ಬರುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸೆ.1ರಿಂದ ಲಿಂಗಸಗೂರಿನಿಂದ ಬಳ್ಳಾರಿಯವರೆಗೆ ನಮ್ಮ ಪಾದಯಾತ್ರೆ ಆರಂಭವಾಗುತ್ತದೆ. ಇಂದೂ ಕೂಡ ನಮ್ಮ‌ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿದ್ದೇನೆ. ಹೋರಾಟ ಯಶಸ್ವಿಯಾಗಿ ಆಗಬೇಕು ಒಳ್ಳೆಯದಾಗಲಿ ಎಂದು ರಾಷ್ಟೀಯ ನಾಯಕರು ತಿಳಿಸಿದ್ದಾರೆ ಎಂದರು.

ನಾಗೇಂದ್ರ ರಾಜೀನಾಮೆ ಬಗ್ಗೆ ಮಾತನಾಡಿ, ಮೊದಲಿಗೆ ನಮ್ಮ ಕಾರ್ಯಕರ್ತರಿಗೆ ಅಭಿನಂದಿಸುತ್ತೇನೆ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವ ಪರಿಸ್ಥಿತಿ ನಿರ್ಮಾಣ ಆಗಿದ್ದು, ಸತತ 7 ದಿನ ನಮ್ಮ ಕಾರ್ಯಕರ್ತರು ಅಹೋರಾತ್ರಿ ಧರಣಿ ಯಶಸ್ವಿಯಾಗಿ ಮಾಡಿದರು ಎಂದರು.ಸದನದ ಹೊರಗಡೆ ಅರ್ಥ ಪೂರ್ಣ ಹೋರಾಟ ಆಗಿದೆ. ಸದನದ ಒಳಗಡೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸರ್ಕಾರಕ್ಕೆ ಚಾಟಿ ಬೀಸಿದ್ದೇವೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದನ್ನು ಹಮ್ಮಿಕೊಂಡಿದ್ದೆವು. ಹೀಗಾಗಿ ಅನಿವಾರ್ಯವಾಗಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಯಿತು ಎಂದರು.

ನಮ್ಮ ಹೋರಾಟ ವ್ಯಕ್ತಿಗತವಲ್ಲ, ಬದಲಿಗೆ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎಂದ ವಿಜಯೇಂದ್ರ, ದಲಿತರ ಹಣ ಲೂಟಿ ಮಾಡಿರುವು ವಿಚಾರವಾಗಿ ನಮ್ಮ ಹೋರಾಟ. ಮೊದಲ ಹಂತದಲ್ಲಿ ನಮಗೆ ಯಶಸ್ಸು ಸಿಕ್ಕಿದೆ. ಆದರೆ ಅನೇಕ ವಿಚಾರಗಳನ್ನು ಇಟ್ಟುಕೊಂಡು ಹೋರಾಡುತ್ತಿದ್ದೇವೆ ಎಂದರು.

ಕಾಂಗ್ರೆಸ್‌ ಯುವ ಸಮೂಹಕ್ಕೆ ದ್ರೋಹ ಬಗೆಯುವ ಕೆಲಸ ಮಾಡಿದೆ. ಗೃಹ ಲಕ್ಷ್ಮೀ ಯೋಜನೆಯ 5 ಸಾವಿರ ಕೋಟಿ ರು. ಎಲ್ಲಿ‌ ಹೋಗಿದೆಯೆಂದು ಇವತ್ತೂ‌ ಕೂಡ ಗೊತ್ತಿಲ್ಲ ಎಂದರು. ದಲಿತರ ಹಣ ದುರ್ಬಳಕೆ ಮಾಡಿಕೊಂಡು ಮೊಸಳೆ ಕಣ್ಣೀರಿಡುತ್ತಿರುವ ಕಾಂಗ್ರೆಸ್‌ನ ಕಪಟನಾಟಕವನ್ನು ಜನ ಕ್ಷಮಿಸುವುದಿಲ್ಲ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ ಆರ್ಥಿಕ ಅಭಿವೃದ್ಧಿಗೆ ಧಗ್ರಾಯೋ ಸಹಕಾರಿ
ಪಡಿತರ ಅಕ್ಕಿ-ರಾಗಿ ಅಕ್ರಮ ಸಾಗಾಟ ಅಪಘಾತದಲ್ಲಿ ಬಯಲು!