ಅಂತಿಮ ಅಧಿಸೂಚನೆ ಹೊರಡಿಸುವಂತೆ ಸಿಎಂ ಡಿಕೆಶಿಗೆ ರೈತರ ನಿಯೋಗ ಮನವಿ
- ಭೂಮಿ ಕೊಡಲು ಸಿದ್ಧ, ರೆಡ್ ಜೋನ್ನಿಂದ ಮುಕ್ತಿ ಕೊಡಿಸುವಂತೆ ಒತ್ತಾಯ ಕನ್ನಡಪ್ರಭ ವಾರ್ತೆ ರಾಮನಗರ
ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು ಎಂದು ಬಿಡದಿಯ ಸುತ್ತಮುತ್ತಲ ರೈತರ ನಿಯೋಗ ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಮನವಿ ಸಲ್ಲಿಸಿತು.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದ ನಿಯೋಗ ತಕ್ಷಣ ರೆಡ್ ಜೋನ್ ತೆಗೆದು ಹಾಕಬೇಕು. ನಾವು ಜಮೀನು ಕೊಡಲು ಸಿದ್ಧ. ತಕ್ಷಣವೇ ಪರಿಹಾರ ಕೊಡಿ ಎಂದು ಒತ್ತಾಯಿಸಿದರು.
ಹಿರಿಯ ನಾಗರಿಕರಾದ ಯಾಲಕ್ಕಿ ಗೌಡ ಮಾತನಾಡಿ, ನಮ್ಮಲ್ಲಿ ಕೇವಲ 1 ಲಕ್ಷಕ್ಕೆ ಜಮೀನು ಕಳೆದುಕೊಂಡವರನ್ನು ನೋಡಿದ್ದೇನೆ. ಎಲ್ಲರ ಬದುಕು ಅಧ್ವಾನವಾಗಿದೆ. ಈಗ ಪುಣ್ಯಾತ್ಮ ಡಿ.ಕೆ. ಶಿವಕುಮಾರ್ ಸರ್ಕಾರ ಎಲ್ಲವನ್ನೂ ಸರಿ ಮಾಡಲು ಮುಂದಾಗಿದೆ ಎಂದು ಧನ್ಯವಾದ ತಿಳಿಸಿದರು.
ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ಅಧಿಸೂಚನೆ: ಸಿಎಂ ಡಿಕೆಶಿ
ಬಿಡದಿ ರೈತರು ಜಮೀನು ನೀಡಲು ಸಿದ್ಧರಿದ್ದು, ಅಂತಿಮ ಅಧಿಸೂಚನೆ ಹೊರಡಿಸಿದರೆ ನಾವು ಸ್ವಲ್ಪ ಹಣ ಪರಿಹಾರ ಹಾಗೂ ಸ್ವಲ್ಪ ಭೂ ಪರಿಹಾರವನ್ನು ಪಡೆಯುತ್ತೇವೆ ಎಂದು ಹೇಳಿದ್ದಾರೆ. ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಬಾಕಿ ಇರುವ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
ಪಾದಯಾತ್ರೆ ರೈತರ ವಿರೋಧದ ಬಗ್ಗೆ ಕೇಳಿದಾಗ, ಅಲ್ಲಿ ಕೆಲವು ರೈತರು ಮಾತ್ರ ಇದ್ದರು. ಉಳಿದವರು ಮಂಡ್ಯ, ಮೈಸೂರು, ತುಮಕೂರು ಭಾಗದ ಕ್ಷೇತ್ರಗಳಿಂದ ಜನರನ್ನು ಕರೆ ತಂದಿದ್ದರು. ರಾಜಕೀಯಕ್ಕಾಗಿ ಹೋರಾಟ ಮಾಡುವವರನ್ನು ಬೇಡ ಎನ್ನಲು ಸಾಧ್ಯವೇ? ಎಂದರು.
-----------------------
11ಕೆಆರ್ ಎಂಎನ್ 4.ಜೆಪಿಜಿಬಿಡದಿ ಭಾಗದ ರೈತರ ನಿಯೋಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿರುವುದು.