ಆರ್ಥಿಕ, ಡಿಜಿಟಲ್‌ ಸಾಕ್ಷರತಾ ಕಾರ್‍ಯಕ್ರಮ

KannadaprabhaNewsNetwork |  
Published : Feb 06, 2026, 04:15 AM IST
ಆರ್ಥಿಕ ಹಾಗೂ ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮ | Kannada Prabha

ಸಾರಾಂಶ

ನಬಾರ್ಡ್ ಆಶ್ರಯದಲ್ಲಿ ಜಿಲ್ಲಾ ಮಲೆಕುಡಿಯ ಸಂಘ ಉಡುಪಿ ಇದರ ಸಹಯೋಗದೊಂದಿಗೆ ಆರ್ಥಿಕ ಹಾಗೂ ಡಿಜಿಟಲ್ ಸಾಕ್ಷರತಾ ಕಾರ್‍ಯಕ್ರಮ ಗುರುವಾರ ಕಾರ್ಕಳದ ಮಾಳ–ಪೇರಡ್ಕ ಮಲೆಕುಡಿಯ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಕಳ: ನಬಾರ್ಡ್ ಆಶ್ರಯದಲ್ಲಿ ಜಿಲ್ಲಾ ಮಲೆಕುಡಿಯ ಸಂಘ ಉಡುಪಿ ಇದರ ಸಹಯೋಗದೊಂದಿಗೆ ಆರ್ಥಿಕ ಹಾಗೂ ಡಿಜಿಟಲ್ ಸಾಕ್ಷರತಾ ಕಾರ್‍ಯಕ್ರಮ ಗುರುವಾರ ಕಾರ್ಕಳದ ಮಾಳ–ಪೇರಡ್ಕ ಮಲೆಕುಡಿಯ ಸಮುದಾಯ ಭವನದಲ್ಲಿ ನಡೆಯಿತು.

ಕಾರ್‍ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನಬಾರ್ಡ್ ಡಿಡಿಎಮ್ ಸಂಗೀತಾ ಕರ್ತ ಅವರು, ನಬಾರ್ಡ್ ವತಿಯಿಂದ ಮಹಿಳೆಯರು, ಕೃಷಿಕರು ಹಾಗೂ ಸ್ವ ಉದ್ಯೋಗಿಗಳಿಗೆ ಲಭ್ಯವಿರುವ ವಿವಿಧ ಸಾಲ ಸೌಲಭ್ಯಗಳ ಕುರಿತು ವಿವರವಾದ ಮಾಹಿತಿ ನೀಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಲೀಡ್ ಬ್ಯಾಂಕ್‌ನ LDCM ಹರೀಶ್ ಜಿ. ಮಾತನಾಡಿ, ಬ್ಯಾಂಕ್‌ಗಳಲ್ಲಿ ದೊರೆಯುವ ಸಾಲ ಸೌಲಭ್ಯಗಳ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ನೀಡಿದರು.ಬ್ರಹ್ಮಾವರ ರುಡ್‌ಸೆಟ್ ನಿರ್ದೇಶಕ ಬೊಮ್ಮಾಯಿ ಅವರು ಸಂಸ್ಥೆಯಲ್ಲಿ ನಡೆಯುತ್ತಿರುವ ವಿವಿಧ ತರಬೇತಿ ಕಾರ್‍ಯಕ್ರಮಗಳ ಬಗ್ಗೆ ವಿವರಿಸಿ, ಯುವಕರು ಹಾಗೂ ಮಹಿಳೆಯರು ಸ್ವ ಉದ್ಯೋಗಕ್ಕೆ ತರಬೇತಿ ಪಡೆಯುವಂತೆ ಕರೆ ನೀಡಿದರು.

ಪಿಎಂಎಫ್‌ಎಂಇ ಜಿಲ್ಲಾ ಸಂಪನ್ಮೂಲ ವ್ಯಕ್ತಿ ವೆಂಕಟೇಶ ಮಾತನಾಡಿ, ಪಿಎಂಎಫ್‌ಎಂಇ ಯೋಜನೆಯಡಿ ದೊರೆಯುವ ಸೌಲಭ್ಯಗಳು ಮತ್ತು ಉದ್ಯಮ ಆರಂಭಕ್ಕೆ ಇರುವ ಅವಕಾಶಗಳ ಕುರಿತು ಮಾಹಿತಿ ನೀಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಶ್ರೀಲತಾ ಅವರು ಇಲಾಖೆ ವತಿಯಿಂದ ಮಹಿಳೆಯರು ಹಾಗೂ ಮಕ್ಕಳಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು.ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಮಾತನಾಡಿ, ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ಇಂತಹ ಕಾರ್‍ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ಜೊತೆಗೆ ನಬಾರ್ಡ್ ಹಾಗೂ ಲೀಡ್ ಬ್ಯಾಂಕ್ ವತಿಯಿಂದ CSR ಅನುದಾನ ಒದಗಿಸುವಂತೆ ಮನವಿ ಮಾಡಿದರು. ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಉಪಸ್ಥಿತರಿದ್ದರು.

ವಿನುತ ಹಾಗೂ ಕಮಲಾಕ್ಷೀ ಶಿರ್ಲಾಲು ಪ್ರಾರ್ಥಿಸಿದರು. ಜಿಲ್ಲಾ ಮಲೆಕುಡಿಯ ಸಂಘದ ಪ್ರಧಾನ ಕಾರ್‍ಯದರ್ಶಿ ಅಶೋಕ್ ಕೆರ್ವಾಶೆ ನಿರೂಪಿಸಿದರು. ಪ್ರದೀಪ್ ಅಂಡಾರು ಸ್ವಾಗತಿಸಿ, ಕೆನರಾ ಬ್ಯಾಂಕಿನ ಎಫ್‌ಎಲ್‌ಸಿ ಪ್ರದೀಪ್ ಕೆ. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ