- ಜಗಳೂರಿನಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ಶಾಸಕ ರಾಜೇಶ್ ಆರೋಪ - - - ಕನ್ನಡಪ್ರಭ ವಾರ್ತೆ ಜಗಳೂರು
ರಾಜ್ಯ ಸರ್ಕಾರದಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ತಾಲೂಕು ಘಟಕದ ವತಿಯಿಂದ ಹೊಸ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ, ಅಂಬೇಡ್ಕರ್ ವೃತ್ತದ ಮೂಲಕ ತಹಸೀಲ್ದಾರ್ ಕಚೇರಿವರೆಗೂ ಎತ್ತಿನಬಂಡಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ತಹಸೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವೇಳೆ ಅವರು ಮಾತನಾಡಿದರು.
ಸರ್ಕಾರಿ ಆಸ್ತಿ ನೋಂದಣಿ ಶುಲ್ಕ, ಬಿತ್ತನೆಬೀಜ ದರ, ಅಗತ್ಯ ವಸ್ತುಗಳು ಹಾಗೂ ತೈಲ ಬೆಲೆ ಏರಿಕೆಯೊಂದಿಗೆ ಜನವಿರೋಧಿ ನೀತಿಯೊಂದಿಗೆ ಜನಸಾಮಾನ್ಯರ ಬದುಕಿಗೆ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ದಿ ಕಾಮಗಾರಿಗಳು ಮರೀಚಿಕೆಯಾಗುತ್ತಿವೆ. ಕೂಡಲೇ ತೈಲ ಬೆಲೆ ಇಳಿಕೆ ಮಾಡಬೇಕು. ಇಲ್ಲವಾದರೆ ಬಿಜೆಪಿ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ:
ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್, ಮಾಜಿ ಜಿಪಂ ಸದಸ್ಯಎಸ್.ಕೆ.ಮಂಜುನಾಥ್, ಮುಖಂಡರಾದ ಎ.ಎಂ. ಮರುಳಾರಾಧ್ಯ, ಜೆ.ವಿ.ನಾಗರಾಜ್, ಬಿಸ್ತುವಳ್ಳಿ ಬಾಬು, ಬಿದರಕೆರೆ ರವಿಕುಮಾರ್, ಬಾಲೇನಹಳ್ಳಿ ಕೆಂಚನಗೌಡ, ಗಡಿಮಾಕುಂಟೆ ಸಿದ್ದೇಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಸರಕಾರದಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜಗಳೂರು ಬಿಜೆಪಿ ತಾಲೂಕು ಘಟಕದ ವತಿಯಿಂದ ಎತ್ತಿನ ಬಂಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು.