ಅಂಕೋಲಾ: ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ದಾಖಲೆಗಳಲ್ಲಿ ನಮೂದಿಸದೇ ಅಪರಾತಪರಾ ಮಾಡಿದ್ದ ಆರೋಪದ ಮೇಲೆ ಇಲ್ಲಿಯ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಶ ಮಜ್ಜಿಗುಡ್ಡ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದಾರೆ.
ಆರೋಪವೇನು?: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರುಪಾವತಿ ಮಾಡಿದರೂ ದಾಖಲೆಗಳಲ್ಲಿ ನಮೂದಿಸದೇ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ವೆಂಕಟೇಶ ಮಜ್ಜಿಗುಡ್ಡ ನಮಗೆ ಮೋಸ ಮಾಡಿದ್ದಾರೆ ಎಂದು ಸಂಘದ ಮಹಿಳೆಯರು ಆರೋಪಿಸಿದ್ದರು. ಬ್ಯಾಂಕಿನ ಇತರ ಸಿಬ್ಬಂದಿ ಐಡಿ ಬಳಸಿ ಬ್ಯಾಂಕ್ ಹಾಗೂ ಗ್ರಾಹಕರಿಗೆ ವಂಚಿಸಿರುವ ಬಗ್ಗೆ ದೂರು ಕೇಳಿ ಬಂದಿತ್ತು. ಬ್ಯಾಂಕ್ ಅಧಿಕಾರಿಗಳು ತನಿಖೆಗೆ ನಡೆಸಿದಾಗ ತಪ್ಪು ಕಂಡುಬಂದಿದ್ದರಿಂದ ಅವರನ್ನು ಸೇವೆಯಿಂದಲೆ ವಜಾಗೊಳಿಸಿ ಕೆನರಾ ಬ್ಯಾಂಕಿನ ರಾಜ್ಯ ಮುಖ್ಯ ಅಧಿಕಾರಿ ಆದೇಶ ಹೊರಡಿಸಿದ್ದರು.