ಬಾಂಗ್ಲ ಅಕ್ರಮ ವಲಸಿಗರ ಪತ್ತೆ ಮಾಡಿ: ಪರಮೇಶ್ವರ್‌

KannadaprabhaNewsNetwork |  
Published : Feb 07, 2026, 01:15 AM IST
ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ನ್ನು ಗೃಹ ಸಚಿವ ಡಾ,ಜಿ.ಪರಮೇಶ್ವರ್ ಪರಿಶೀಲಿಸಿದರು. ಈ ವೇಳೆ ಜಿಲ್ಲಾ ವರಿಷ್ಠಾಧಿಕಾರಿ ಡಾ.ಜಿತೇಂದ್ರ ಕುಮಾರ್ ದಯಾಮ ಮೊದಲಾದವರಿದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು: ಜಿಲ್ಲಾದ್ಯಂತ ಬಾಂಗ್ಲ ಅಕ್ರಮ ವಲಸಿಗರ ಪತ್ತೆ ನಡೆಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನಿರ್ದೇಶಿಸಿದ್ದಾರೆ.

ಚಿಕ್ಕಮಗಳೂರು: ಜಿಲ್ಲಾದ್ಯಂತ ಬಾಂಗ್ಲ ಅಕ್ರಮ ವಲಸಿಗರ ಪತ್ತೆ ನಡೆಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನಿರ್ದೇಶಿಸಿದ್ದಾರೆ.

ಶುಕ್ರವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿದ ಡಾ.ಜಿ.ಪರಮೇಶ್ವರ್‌, ಜಿಲ್ಲೆಗೆ ಸಂಬಂಧಿಸಿದ ಕಾನೂನು ಸುವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ವೇಳೆ ಜಿಲ್ಲೆಯ ಕಾಫಿ ಎಸ್ಟೇಟ್‌ಗಳಲ್ಲಿ ಇರುವ ಅಕ್ರಮ ವಲಸಿಗರ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ಜಿಲ್ಲಾ ವರಿಷ್ಠಾಧಿಕಾರಿ ಡಾ.ಜಿತೇಂದ್ರ ಕುಮಾರ್ ದಯಾಮ ಅವರಿಗೆ ನಿರ್ದೇಶಿಸಿದರು.

ಇದೇ ವೇಳೆ ನೂತನವಾಗಿ ಸ್ಥಾಪಿಸಲಾದ ಇಂಟೆಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ (ಐಸಿಸಿಸಿ)ಗೆ ಭೇಟಿ ನೀಡಿ ಪರಿಶೀಲಿಸಿ ಕ್ಯಾಮರಾ ಗುಣಮಟ್ಟ ತುಂಬಾ ಚೆನ್ನಾಗಿದೆ. ಚಿಕ್ಕಮಗಳೂರು ನಗರಕ್ಕೆ ಸೀಮಿತವಾದ ಈ ಕೇಂದ್ರದ ಕಾರ್ಯ ಚಟುವಟಿಕೆಯನ್ನು ಜಿಲ್ಲೆಯ ತಾಲೂಕು ಕೇಂದ್ರ ಸೇರಿದಂತೆ ಪ್ರಮುಖ ಸ್ಥಳಗಳಿಳೂ ವಿಸ್ತರಿಸಲು ಕ್ರಮ ವಹಿಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಫೋಟೊ::

ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ನ್ನು ಗೃಹ ಸಚಿವ ಡಾ,ಜಿ.ಪರಮೇಶ್ವರ್ ಪರಿಶೀಲಿಸಿದರು. ಈ ವೇಳೆ ಜಿಲ್ಲಾ ವರಿಷ್ಠಾಧಿಕಾರಿ ಡಾ.ಜಿತೇಂದ್ರ ಕುಮಾರ್ ದಯಾಮ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೇ 8 ರಂದು ರಾಜ್ಯಮಟ್ಟದ ರೈತ ಜಾಗೃತಿ ಸಮಾವೇಶ
ಪ್ರಧಾನಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ನೈತಿಕತೆ ಇಲ್ಲ: ಯತ್ನಾಳ