‘ಈಜಿಪುರ ಮೇಲ್ಸೇತುವೆ ಕೆಲಸ ನಿಗಧಿತ ಅವಧಿಯಲ್ಲಿ ಮುಗಿಸಿ’

KannadaprabhaNewsNetwork |  
Published : Sep 14, 2024, 01:47 AM IST
ಈಜಿಪುರ  | Kannada Prabha

ಸಾರಾಂಶ

ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈಜೀಪುರ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿ ಕಾರ್ಯಪ್ರಗತಿ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಶ್ನಿಸಿದರು. ಇದಕ್ಕೆ ಯೋಜನಾ ವಿಭಾಗದ ಮುಖ್ಯ ಅಭಿಯಂತರ ಪ್ರತಿಕ್ರಿಯಿಸಿ, ಈಜಿಪುರ ಮೇಲ್ಸೇತುವೆಯ ಬಾಕಿ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲು ಸರ್ಕಾರದ ಅನುಮೋದನೆಯಂತೆ ಮೆ. ಬಿ.ಎಸ್.ಸಿ.ಪಿ.ಎಲ್ ಇನ್ಫ್ರಾಸ್ಟ್ರಕ್ಚರ್ ಲಿ. ಗುತ್ತಿಗೆದಾರರಿಗೆ 2023ರ ನವೆಂಬರ್ 15ರಂದು ಕಾರ್ಯಾದೇಶ ನೀಡಲಾಗಿದೆ.

ಪ್ರಸ್ತುತ 27 ಪೈಲಿಂಗ್‌ಗಳು, ಮೂರು ಪ್ರಿ-ಕಾಸ್ಟ್ ಸೆಗ್‌ಮೆಂಟ್‌ ನಿರ್ಮಾಣ, 9 ಪ್ರಿ-ಕಾಸ್ಟ್‌ ಸೆಗ್‌ಮೆಂಟ್‌ ಲಾಂಚಿಂಗ್, ರ‍್ಯಾಂಪ್‌ಗಳ ನಿರ್ಮಾಣ, ಮೇಲ್ಸೇತುವೆಯ ಕೆಳಗಿನ ರಸ್ತೆ, ಪಾದಚಾರಿ ಮಾರ್ಗ ಮತ್ತು ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಅಲ್ಲದೇ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಗುತ್ತಿಗೆದಾರರಿಗೆ ₹25 ಲಕ್ಷ ದಂಡ ವಿಧಿಸಲಾಗಿದೆ. ರಕ್ಷಣಾ ಇಲಾಖೆಗೆ ಸಂಬಂಧಿಸಿದ ಜಾಗವನ್ನು ಹಸ್ತಾಂತರಿಸಿಕೊಂಡು ಕಾಮಗಾರಿ ನಿರ್ವಹಿಸಲಾಗುತ್ತಿದೆ. ಸೇಂಟ್ ಜಾನ್ಸ್ ಸಂಸ್ಥೆ ಜತೆಗೆ ಸಭೆ ನಡೆಸಿ ಯೋಜನೆಗೆ ಪ್ರಮುಖವಾಗಿ ಅಗತ್ಯವಿರುವ ಜಾಗ ಹಸ್ತಾಂತರಿಸಲು ಮನವಿ ಮಾಡಲಾಗಿದೆ. ಗುತ್ತಿಗೆದಾರರಿಗೆ ಕರಾರಿನಂತೆ ಮುಂಗಡ ಹಣ ಪಾವತಿಯಾಗಿದ್ದು, ಬಾಕಿ ಇದ್ದ ಬಿಲ್ಲನ್ನು ಸಹ ಪಾವತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪರಿಶೀಲನೆಯ ವೇಳೆ ವಲಯ ಆಯುಕ್ತೆ ವಿನೋತ್ ಪ್ರಿಯಾ, ಜಂಟಿ ಆಯುಕ್ತ ಶಿವಕುಮಾರ್, ಪ್ರಧಾನ ಅಭಿಯಂತರ ಪ್ರಹ್ಲಾದ್, ಮುಖ್ಯ ಅಭಿಯಂತರ ರಾಜೇಶ್, ಲೋಕೇಶ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!