ಕನ್ನಡಪ್ರಭ ವಾರ್ತೆ ಉಡುಪಿ
ಕಳ್ಳರ ಮೇಲೆ ಕ್ರಮ ಜರಗಿಸದೆ, ನ್ಯಾಯ ಕೇಳಲು ಬಂದವರ ವಿರುದ್ಧ ಪ್ರಕರಣ ದಾಖಲಿಸಿರುವುದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಳಿ ತಪ್ಪಿರುವುದಕ್ಕೆ ಜ್ವಲಂತ ನಿದರ್ಶನವಾಗಿದೆ ಎಂದವರು ಹೇಳಿದ್ದಾರೆ.
ಈ ಹಿಂದೆ ವಿಧಾನ ಪರಿಷತ್ ಕಲಾಪದಲ್ಲಿ ಸಭಾಧ್ಯಕ್ಷರನ್ನು ಪೀಠದಿಂದ ಎಳೆದಾಡಿದ್ದ ಕಾಂಗ್ರೆಸ್ ಶಾಸಕರು ಗೂಂಡಾಗಿರಿ ಸಂಸ್ಕೃತಿಯ ದಿವ್ಯ ದರ್ಶನ ನೀಡಿದ್ದರು. ಹನಿಟ್ರ್ಯಾಪ್ ಪ್ರಕರಣ ಹಾಗೂ ಧರ್ಮಾಧಾರಿತ ಮೀಸಲಾತಿಯನ್ನು ಸದನದಲ್ಲಿ ವಿರೋಧಿಸಿರುವ ಶಾಸಕ ಯಶ್ಪಾಲ್ ಸುವರ್ಣ ಸಹಿತ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ನಡೆ ಸಂವಿಧಾನ ವಿರೋಧಿಯಾಗಿದೆ ಎಂದವರು ಆರೋಪಿಸಿದ್ದಾರೆಕೇವಲ ಅಧಿಕಾರದ ದಾಹಕ್ಕಾಗಿ ರಾಜ್ಯವನ್ನು ಸಾಲದ ಶೂಲಕ್ಕೇರಿಸಿ ರಾಜ್ಯದ ಹಿತ ಬಲಿಕೊಡುತ್ತಿರುವ ಕಾಂಗ್ರೆಸ್ ಸರಕಾರದ ಸಂವಿಧಾನ ವಿರೋಧಿ, ಜನ ವಿರೋಧಿ ನೀತಿಯನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು ಸೂಕ್ತ ಸಮಯದಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.