ಬೆಂಕಿಗಾಹುತಿಯಾದ ಮೆಕ್ಕೆಜೋಳದ ಬೆಳೆ

KannadaprabhaNewsNetwork |  
Published : Nov 12, 2025, 02:15 AM IST
ಕುಂದಗೋಳ ತಾಲೂಕಿನ ಕಳಸ ಗ್ರಾಮದಲ್ಲಿ ಜಮೀನಿನಲ್ಲಿ ಬೆಂಕಿಗೆ ಆಹುತಿಯಾದ ಮೆಕ್ಕೆಜೋಳ ಬೆಳೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ವೀಕ್ಷಿಸಿದರು. | Kannada Prabha

ಸಾರಾಂಶ

ಹಾನಿಯಾದ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಷಣ್ಮುಖಪ್ಪ ಶಿವಳ್ಳಿ, ರೈತರಿಗೆ ವೈಯಕ್ತಿಕವಾಗಿ ಧನಸಹಾಯ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್‌ಗೆ ಕರೆ ಮಾಡಿ ಹಾನಿಯಾದ ಬೆಳೆಯ ಕುರಿತು ಮಾಹಿತಿ ನೀಡಿ ತಕ್ಷಣ ಪರಿಹಾರ ನೀಡುವಂತೆ ಮನವಿ ಮಾಡಿದರು.

ಕುಂದಗೋಳ:

ತಾಲೂಕಿನ ಕಳಸ ಗ್ರಾಮ ವ್ಯಾಪ್ತಿಯ ಜಮೀನಿನಲ್ಲಿ ಸೋಮವಾರ ಬೆಂಕಿ ಅವಘಡ ಸಂಭವಿಸಿ 12 ಎಕರೆಯಷ್ಟು ಮೆಕ್ಕೆಜೋಳ ಬೆಳೆ ಸಂಪೂರ್ಣವಾಗಿ ಸುಟ್ಟಿದ್ದು ಜಮೀನಿಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖಪ್ಪ ಶಿವಳ್ಳಿ ಭೇಟಿ ನೀಡಿ ಪರಿಶೀಲಿಸಿದರು.

ರೈತರಾದ ಈರಣ್ಣ ದೊಡ್ಡೂರ, ನಿಂಗನಗೌಡ ಮರಿಗೌಡ್ರ, ಮಹ್ಮದಹನೀಫ ಉಪ್ಪಾರ ಮತ್ತು ಹಜರೇಸಾಬ ಸೂರಣಗಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಗೋವಿನ ಜೋಳಕ್ಕೆ ಬೆಂಕಿ ತಗುಲಿ ಸಂಪೂರ್ಣ ನಾಶವಾಗಿದೆ.

ಹಾನಿಯಾದ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಷಣ್ಮುಖಪ್ಪ ಶಿವಳ್ಳಿ, ರೈತರಿಗೆ ವೈಯಕ್ತಿಕವಾಗಿ ಧನಸಹಾಯ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್‌ಗೆ ಕರೆ ಮಾಡಿ ಹಾನಿಯಾದ ಬೆಳೆಯ ಕುರಿತು ಮಾಹಿತಿ ನೀಡಿ ತಕ್ಷಣ ಪರಿಹಾರ ನೀಡುವಂತೆ ಮನವಿ ಮಾಡಿದರು.

ಈ ವೇಳೆ ರಾಮನಗೌಡ ಪಾಟೀಲ, ರಾಮಣ್ಣ ಪೂಜಾರ, ಇರ್ಷಾದಅಹ್ಮದ ಹುಲಗೂರ, ಸೋಮಣ್ಣ ಹೊಸಮನಿ, ಕೆ.ಎಂ. ಹಾರೋಬಿಡಿ, ವಿದ್ಯಾಧರ ಅಕ್ಕೂರ, ಶಂಭಣ್ಣ ಬಿಶೇರೊಟ್ಟಿ, ಮಹದೇವಗೌಡ ಕಶೆಟ್ಟಿ, ತಿರಕನಗೌಡ ಬಮ್ಮನಗೌಡ್ರ, ಅಶೋಕ ಹೆಬಸೂರ, ಮಾಬೂಲಿ ನದಾಫ, ಚಿಕ್ಕನಗೌಡ ಬಮ್ಮನಗೌಡ್ರ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ