ಎಂಎಸ್‌ಇಝಡ್‌ ಕಂಪನಿಯಲ್ಲಿ ಅಗ್ನಿ ದುರಂತ

KannadaprabhaNewsNetwork |  
Published : Jul 15, 2024, 01:45 AM IST
ಸುರತ್ಕಲ್ ಕ್ಯೆಗಾರಿಕಾ ವಲಯದಲ್ಲಿ  ಮತ್ಸ್ಯೋದ್ಯಮ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ | Kannada Prabha

ಸಾರಾಂಶ

ಕಂಪನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೌಕರರು ಇಲ್ಲದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಕನ್ನಡಪ್ರಭ ವಾರ್ತೆ ಮೂಲ್ಕಿ ಸುರತ್ಕಲ್‌ ಸಮೀಪದ ಕೈಗಾರಿಕಾ ವಲಯ (ಎಂಎಸ್‌ಇಝಡ್)ದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಥೆಂಟಿಕ್ ಓಷನ್ ಟ್ರಶರ್‌ ಮತ್ಸ್ಯೋದ್ಮಯ ಫ್ಯಾಕ್ಟರಿಯಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.

ಕಂಪನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೌಕರರು ಇಲ್ಲದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಅಥೆಂಟಿಕ್ ಓಷನ್ ಟ್ರೆಶರ್ ಕಂಪನಿಯು ಮೀನನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ಪರಿವರ್ತಿಸಿ 10 ಕೆ.ಜಿ. ಯ ಪ್ಯಾಕೆಟ್‌ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪನಿಯಾಗಿದೆ. ಈ ಸಂಸ್ಥೆಯ ಕೋಲ್ಡ್ ಸ್ಟೋರ್ ಸೆಕ್ಷನ್ ಹಾಗೂ ಕಟ್ಟಿಂಗ್ ಸೆಕ್ಷನ್‌ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶದೆತ್ತರಕ್ಕೆ ಹೊಗೆ ಉಗುಳುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಅಗ್ನಿ ಅವಘಡದಿಂದ ಸುಮಾರು 10 ಕೋಟಿ ರು. ಮೌಲ್ಯದ ಮೀನಿನ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ. ಕೈಗಾರಿಕಾ ವಲಯದ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ