ಸರ್ಕಾರಿ ಬಸ್ಸಿನಲ್ಲಿ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

KannadaprabhaNewsNetwork |  
Published : Jan 08, 2026, 01:15 AM IST
KSRTC

ಸಾರಾಂಶ

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ದೊಡ್ಡ ಅನಾಹುತದಿಂದ ಪ್ರಯಾಣಿಕರು ಪಾರಾಗಿರುವ ಘಟನೆ ತಾಲೂಕಿನ ಬೇತಮಂಗಲ ಮುಖ್ಯ ರಸ್ತೆಯ ಭಟ್ರಹಳ್ಳಿ ಗೇಟ್ ಬಳಿ ನಡೆದಿದೆ.

ಕೋಲಾರ : ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ದೊಡ್ಡ ಅನಾಹುತದಿಂದ ಪ್ರಯಾಣಿಕರು ಪಾರಾಗಿರುವ ಘಟನೆ ತಾಲೂಕಿನ ಬೇತಮಂಗಲ ಮುಖ್ಯ ರಸ್ತೆಯ ಭಟ್ರಹಳ್ಳಿ ಗೇಟ್ ಬಳಿ ನಡೆದಿದೆ. 

ಕೋಲಾರದಿಂದ ಬೇತಮಂಗಲಕ್ಕೆ ಹೊರಟ್ಟಿದ್ದ ಬಸ್‌

ಕೋಲಾರದಿಂದ ಬೇತಮಂಗಲಕ್ಕೆ ಹೊರಟ್ಟಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಭಟ್ರಹಳ್ಳಿ ಗೇಟ್ ಬಳಿ ಬಸ್‌ನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಸ್ಥಳಿಯರು ಹಾಗೂ ಪ್ರಯಾಣಿಕರು ಬಸ್‌ಗೆ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ, ಬಸ್‌ನಲ್ಲಿ 70 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು, ಬಸ್‌ನ ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಾಣಿಸಿಕೊಂಡ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಯಾಣಿಕರು ಬೇರೆ ಬಸ್‌ನಲ್ಲಿ ಪ್ರಯಾಣ

ಬಸ್‌ನಲ್ಲಿದ್ದ ಅಗ್ನಿ ಅಳವಡಿಸಲಾಗಿದ್ದ ಉಪಕರಣ ಮೂಲಕ ಬಸ್‌ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಬಸ್‌ನ ನಿರ್ವಾಹಕ ನಂದಿಸಿದ ನಂತರ ಪ್ರಯಾಣಿಕರು ಬೇರೆ ಬಸ್‌ನಲ್ಲಿ ಪ್ರಯಾಣ ಬೆಳಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ