ಶಿವಗಂಗೆ ಬೆಟ್ಟದಲ್ಲಿ ಬೆಂಕಿ: 20 ಎಕರೆ ಅರಣ್ಯ ಪ್ರದೇಶ ಭಸ್ಮ

KannadaprabhaNewsNetwork |  
Published : Feb 18, 2026, 01:15 AM IST
ಪೋಟೋ 5 * 6 : ಶಿವಗಂಗೆ ಬೆಟ್ಟಕ್ಕೆ ಬೆಂಕಿ ಬಿದ್ದಿರುವುದು | Kannada Prabha

ಸಾರಾಂಶ

ದಾಬಸ್‍ಪೇಟೆ: ಸೋಂಪುರ ಹೋಬಳಿ ದಕ್ಷಿಣಕಾಶಿ ಶಿವಗಂಗೆ ಬೆಟ್ಟದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಭಾನುವಾರ ರಾತ್ರಿಯಿಂದಲೇ ಕಾಡ್ಗಿಚ್ಚು ವ್ಯಾಪಿಸುತ್ತಿದೆ. ಪ್ರಸಿದ್ಧ ಪ್ರವಾಸಿ ತಾಣ ಶಿವಗಂಗೆ ಬೆಟ್ಟದಲ್ಲಿ ಕಾಡ್ಗಿಚ್ಚು 20 ಎಕರೆಯಷ್ಟು ಅರಣ್ಯ ಪ್ರದೇಶ ಸುಟ್ಟು ಭಸ್ಮ ಮಾಡಿದೆ. ಒಳಕಲ್ಲು ತೀರ್ಥದವರೆಗೂ ಬೆಟ್ಟದ ಸುತ್ತಮುತ್ತಲೂ ಸಂಪೂರ್ಣ ಬೆಂಕಿ ಆವರಿಸಿ ಆತಂಕ ಸೃಷ್ಟಿಸಿದೆ

ದಾಬಸ್‍ಪೇಟೆ: ಸೋಂಪುರ ಹೋಬಳಿ ದಕ್ಷಿಣಕಾಶಿ ಶಿವಗಂಗೆ ಬೆಟ್ಟದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಭಾನುವಾರ ರಾತ್ರಿಯಿಂದಲೇ ಕಾಡ್ಗಿಚ್ಚು ವ್ಯಾಪಿಸುತ್ತಿದೆ. ಪ್ರಸಿದ್ಧ ಪ್ರವಾಸಿ ತಾಣ ಶಿವಗಂಗೆ ಬೆಟ್ಟದಲ್ಲಿ ಕಾಡ್ಗಿಚ್ಚು 20 ಎಕರೆಯಷ್ಟು ಅರಣ್ಯ ಪ್ರದೇಶ ಸುಟ್ಟು ಭಸ್ಮ ಮಾಡಿದೆ. ಒಳಕಲ್ಲು ತೀರ್ಥದವರೆಗೂ ಬೆಟ್ಟದ ಸುತ್ತಮುತ್ತಲೂ ಸಂಪೂರ್ಣ ಬೆಂಕಿ ಆವರಿಸಿ ಆತಂಕ ಸೃಷ್ಟಿಸಿದೆ.

ಭಾನುವಾರ ರಾತ್ರಿ 7.30ರಲ್ಲಿ ಶಿವಗಂಗೆ- ಮುದ್ವಿರೇಶ್ವರ ಬೆಟ್ಟಕ್ಕೆ ಹೋಗುವ ಕಂಬಾಳು ತಪ್ಪಲಿನ ರಸ್ತೆ ಕಡೆಯ ಶಿವಗಂಗೆ ಬೆಟ್ಟದ ಮಧ್ಯಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಿವಗಂಗೆ ಬೆಟ್ಟಕ್ಕೆ ಪ್ರತಿ ವರ್ಷದ ಬೇಸಿಗೆ ವೇಳೆ ಬೆಂಕಿ ಆತಂಕ ಸೃಷ್ಟಿಸುತ್ತಲೇ ಇದೆ. ಅಪಾರ ಸಸ್ಯರಾಶಿ ಪ್ರಾಣಿ ಸಂಕುಲ ಹಾನಿಯಾಗುತ್ತಿದೆ. ಧೂಮಪಾನಿಗಳ ನಿರ್ಲಕ್ಷ್ಯದಿಂದ, ಕೆಲವೊಮ್ಮೆ ಪುಂಡರ ಅಟ್ಟಹಾಸಕ್ಕೆ ದುರ್ಘಟನೆ ನಡೆಯುತ್ತದೆ ಎನ್ನುವುದು ಸ್ಥಳೀಯರ ಆರೋಪ.

ಬೆಟ್ಟದ ಸುತ್ತಮುತ್ತಲೂ ಬೆಂಕಿ ಹೊತ್ತಿಕೊಂಡಿರುವ ಜಾಗಕ್ಕೆ ಅಗ್ನಿಶಾಮಕ ವಾಹನ ಸೇರಿದಂತೆ ಯಾರೂ ಹೋಗಲು ಸಾಧ್ಯವಾಗದ ಕಾರಣ ನೋಡನೋಡುತ್ತಲೇ ಬೆಂಕಿ ಮುಗಿಲೆತ್ತರಕ್ಕೆ ಆವರಿಸಿತು. ಶಿವಗಂಗೆ ಬೆಟ್ಟ ಸಾಕಷ್ಟು ಎತ್ತರವಾಗಿದ್ದು, ಬೆಟ್ಟದ ತಪ್ಪಲಿನ ಜಾಗ ಯಾರೂ ಹೋಗಲಾಗದಷ್ಟು ಕಲ್ಲುಮುಳ್ಳುಗಳ ದುರ್ಗಮ ಹಾದಿ. ಹೀಗಾಗಿ ಬೆಂಕಿ ಬಿದ್ದ ಜಾಗಕ್ಕೆ ಹೋಗಿ ಬೆಂಕಿ ನಂದಿಸೋದು ಅಸಾಧ್ಯವಾಗಿದೆ. ಇದರಿಂದ ಶಿವಗಂಗೆ ಬೆಟ್ಟದಲ್ಲಿ ಬೆಂಕಿ ಹೊತ್ತಿಕೊಂಡರೂ ತಾನಾಗೇ ಆರಿ ಹೋಗಬೇಕೆ ಹೊರತು ಬೆಂಕಿ ನಂದಿಸಲಾಗುತ್ತಿಲ್ಲ. ಹೀಗಾಗಿ ಪ್ರತಿವರ್ಷವೂ ಬೇಸಿಗೆಯಲ್ಲಿ ಇಂತಹ ಅವಘಡಗಳು ಮರುಕಳಿಸುತ್ತಲೇ ಇರುತ್ತವೆ.

ಪೋಟೋ 5 * 6 :ಶಿವಗಂಗೆ ಬೆಟ್ಟಕ್ಕೆ ಬೆಂಕಿ ಬಿದ್ದಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌