ಸಂತೋಷ ದೈವಜ್ಞ
ಹೀಗಾಗಿ ಹಲವು ವರ್ಷಗಳಿಂದ ಪ್ರತ್ಯೇಕ ಅಗ್ನಿಶಾಮಕ ಠಾಣೆ ಬೇಕೆಂಬ ಬೇಡಿಕೆ ಹೆಚ್ಚಾದ ಹಿನ್ನೆಲೆ ೨೦೧೩ರಲ್ಲಿ ಅಂದಿನ ಶಾಸಕ ವಿ.ಎಸ್. ಪಾಟೀಲ ಅವರ ಇಚ್ಛಾಶಕ್ತಿ ಹಾಗೂ ಪ್ರಯತ್ನದ ಫಲವಾಗಿ ತಾಲೂಕಿಗೆ ಪ್ರತ್ಯೇಕ ಅಗ್ನಿಶಾಮಕ ಠಾಣೆ ಮಂಜೂರು ಮಾಡಿಸಿದ್ದರು. ಇಲ್ಲಿಯ ಪಂಚಾಯತ್ ರಾಜ್ ಇಲಾಖೆಯ ಕಚೇರಿಯ ಆವರಣದಲ್ಲಿ ತಾತ್ಕಾಲಿಕವಾಗಿ ಅಗ್ನಿಶಾಮಕ ಠಾಣೆ ನಿರ್ಮಿಸಿ, ಅಗ್ನಿಶಾಮಕ ವಾಹನ ನಿಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.
೨೦೨೦ರಲ್ಲಿ ಪಟ್ಟಣದ ಕೃಷಿ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆವರಣದಲ್ಲಿ ಪಪಂನಿಂದ ಕೊಳವೆ ಬಾವಿ ಕೊರೆದು ತಾತ್ಕಾಲಿಕ ಶೆಡ್ ನಿರ್ಮಿಸಿ ಅಗ್ನಿಶಾಮಕ ಠಾಣೆಯನ್ನು ಸ್ಥಳಾಂತರಿಸಲಾಯಿತು. ಆ ಬಳಿಕ ಶಾಸಕ ಶಿವರಾಮ ಹೆಬ್ಬಾರ ಸಚಿವರಾದ ವೇಳೆ ಅಗ್ನಿಶಾಮಕ ಠಾಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಎಪಿಎಂಸಿ ಆವರಣದಲ್ಲಿ ಲೀಜ್ ಮೂಲಕ ಜಾಗ ಪಡೆದು ಸುಮಾರು ₹೩ ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ಅನುದಾನ ನೀಡಿದ್ದರು. ಅದರಂತೆ ಈಗಾಗಲೇ ಸುಸಜ್ಜಿತವಾದ ಅಗ್ನಿಶಾಮಕ ಠಾಣೆ ಕಟ್ಟಡ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿದೆ.ಸ್ವಂತ ಕಟ್ಟಡ ಇಲ್ಲದ ಕಾರಣದಿಂದ ಸದ್ಯ ಒಂದೇ ಒಂದು ಅಗ್ನಿಶಾಮಕ ವಾಹನ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಹೊಸದಾಗಿ ನಿರ್ಮಾಣ ಮಡಲಾಗಿರುವ ಠಾಣೆಯಲ್ಲಿ ಮೂರು ಅಗ್ನಿಶಾಮಕ ವಾಹನ ನಿಲ್ಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಅದರಂತೆ ಹೆಚ್ಚುವರಿ ವಾಹನ ಮತ್ತು ಸಿಬ್ಬಂದಿಗಳನ್ನು ನೇಮಿಸಬೇಕೆಂಬುವುದು ಸಾರ್ವಜನಿಕರ ಆಗ್ರಹವಾಗಿದೆ.ಶೀಘ್ರ ಉದ್ಘಾಟನೆ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಸಚಿವರಿಂದ ದಿನಾಂಕ ನಿಗದಿಪಡಿಸಿ ಅಗತ್ಯ ಅಗ್ನಿಶಾಮಕ ವಾಹನ ಹಾಗೂ ಸಕಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಶೀಘ್ರವೇ ಅಗ್ನಿಶಾಮಕ ಠಾಣೆ ಕಟ್ಟಡ ಉದ್ಘಾಟನೆ ಮಾಡಲಾಗುವುದು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.