ಜೆಡಿಎಸ್ ಕಾರ್ಯಕರ್ತರ ಹರ್ಷೋದ್ಗಾರ । ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ರೇವಣ್ಣ
ಕನ್ನಡಪ್ರಭ ವಾರ್ತೆ ಬೇಲೂರುಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಿಲುಕಿ ವಿಚಾರಣಾ ಕೈದಿಯಾಗಿ ಜೈಲು ಪಾಲಾಗಿದ್ದ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಸೋಮವಾರ ಸಂಜೆ ವೇಳೆಗೆ ಜಾಮೀನು ಪಡೆದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದ ಬಳಿ ಸಂಭ್ರಮ ಆಚರಿಸಿದರು.ಇದೇ ವೇಳೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಬಿ ಸಿ ಉಮೇಶ್ ಮಾತನಾಡಿ, ಇಲ್ಲಿನ ಕಾಂಗ್ರೆಸ್ ಸರ್ಕಾರ ಜೆಡಿಎಸ್ ಪಕ್ಷವನ್ನು ಮುಗಿಸುವ ಹುನ್ನಾರ ನಡೆಸಿ ಪೆನ್ಡ್ರೈವ್ ಹೈಡ್ರಾಮ ನಡೆಸುವ ಮೂಲಕ ಜೆಡಿಎಸ್ ಪಕ್ಷದ ಕುಟುಂಬವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸದೆ ಎಸ್ಐಟಿ ತನಿಖೆ ನಡೆಸಿ ಜೆಡಿಎಸ್ ಮುಗಿಸಲು ಹುನ್ನಾರ ನಡೆಸುತ್ತಿದೆ. ಆದರೆ ಜೆಡಿಎಸ್ ಕಾರ್ಯಕರ್ತರು ಯಾವುದೇ ಬೆದರಿಕೆಗೆ ಮುಂದಾಗದೆ ತಮ್ಮ ನಾಯಕರಾದ ಎಚ್.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣನವರ ಕೈ ಮತ್ತಷ್ಟು ಬಲಪಡಿಸುವ ಮೂಲಕ ಜೆಡಿಎಸ್ ಪಕ್ಷವನ್ನು ಬಲಪಡಿಸಲು ಮುಂದಾಗುತ್ತೇವೆ ಎಂದು ಹೇಳಿದರು.
ಈ ಸಂದರ್ಭ ಜೆಡಿಎಸ್ ಮುಖಂಡರಾದ ಎಸ್.ಕೆ.ನಾಗೇಶ್, ಶ್ರೀವತ್ಸ, ಹೆಬ್ಬಾಳು ಗಿರೀಶ್, ಇತರರು ಹಾಜರಿದ್ದರು. ಸಿಹಿ ಹಂಚಿ ಜೆಡಿಎಸ್ ಮುಖಂಡರ ಸಂಭ್ರಮಅರಸೀಕೆರೆ: ಜೆಡಿಎಸ್ ಮುಖಂಡ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಬಿಡುಗಡೆಗೆ ನಗರದಲ್ಲಿ ಜೆಡಿಎಸ್ ಮುಖಂಡರು ನಗರದ ಬಸವೇಶ್ವರ. ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಮಾತನಾಡಿ, ರಾಜ್ಯ ಸರ್ಕಾರ ಅಕ್ರಮವಾಗಿ ಎಚ್.ಡಿ.ರೇವಣ್ಣರನ್ನು ಬಂಧಿಸಿದ್ದು ನ್ಯಾಯಾಲಯ ಅವರ ಬಂಧನಕ್ಕೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ. ಹಾಸನ ಜನತೆಗೆ ನ್ಯಾಯ ದೊರಕಲಿ. ನಿಜವಾದ ತಪ್ಪಿತಸ್ಥರ ವಿರುದ್ದ ಕ್ರಮವಾಗಲಿ. ಅವರು ಬೆಳಕಿಗೆ ಬರಲಿ. ಪೊಲೀಸ್ ಇಲಾಖೆಯಿಂದ ಸೂಕ್ತ ತನಿಖೆಯಾಗಲಿ ಎಂದು ಹೇಳಿದರು.ಜೆಡಿಎಸ್ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಬಿ.ಎನ್.ವಿದ್ಯಾಧರ್, ಲೋಕೇಶ್, ಶೇಖರ್ ನಾಯ್ಕ, ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್, ನಾಗಸಮುದ್ರ ಸ್ವಾಮಿ, ರಮೇಶ್ ನಾಯ್ಡು, ಶಿವನ್ ರಾಜ್, ಶೇಖರ್ ಯಾದವ್, ಪುಟ್ಟ ಇದ್ದರು.