ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಉತ್ತರ ಪ್ರದೇಶ ಮೂಲಕ ಲಕ್ಷ್ಮಣ ಎಂಬ 35 ವರ್ಷದ ವ್ಯಕ್ತಿ ನದಿ ಪ್ರವಾಹದಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪಟ್ಟಣದ ರಾಂಪುರ ರಸ್ತೆಯ ಟಿಎಪಿಎಂಸಿ ಬಳಿಯ ಡೆಲ್ಲಿಗೆಟ್ ಬಳಿ ಇರುವ ಕಾವೇರಿ ನದಿ ಬಳಿ ವ್ಯಕ್ತಿ ಸಿಲುಕಿರುವ ಬಗ್ಗೆ ಸ್ಥಳೀಯ ಜನರಿಂದ ಮಾಹಿತಿ ಪಡೆದ ಪಟ್ಟಣದ ಅಗ್ನಿಶಾಮಕ ಠಾಣಾಧಿಕಾರಿ ಅಂಬರೀಷ್ ಎನ್.ಉಪ್ಪಾರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.ಈತ ಉತ್ತರ ಪ್ರದೇಶದವನಾಗಿದ್ದು, ಉದ್ಯೋಗ ಅರಸಿ ಮಹಾರಾಷ್ಟ್ರ ನಂತರ ಕರ್ನಾಟಕಕ್ಕೆ ಬಂದಿದ್ದಾನೆ. ಕೆಆರ್ಎಸ್ ಅಣೆಕಟ್ಟೆಯಿಂದ 80 ಸಾವಿರಕ್ಕೂ ಹೆಚ್ಚಿನ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಪಟ್ಟಣದ ಡೆಲ್ಲಿಗೆಟ್ ಬಳಿ ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದು ರಕ್ಷಣೆ ಮಾಡಲಾಗಿದೆ.
ಕಾವೇರಿ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ಶ್ರೀರಂಗಪಟ್ಟಣ: ತಾಲೂಕಿನ ಬೊಮ್ಮುರು ಅಗ್ರಹಾರ ಗ್ರಾಮದ ಪಶ್ಚಿಮವಾಹಿನಿ ಕಾವೇರಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಗೆ ಸುಮಾರು 45 ರಿಂದ 50 ವರ್ಷವಾಗಿದೆ. 5.6 ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ನೀಲಿ ಬಣ್ಣದ ಅಂಡರ್ ವೇರ್, ನೀಲಿ ಬಣ್ಣದ ಟ್ರ್ಯಾಕ್ ಪ್ಯಾಟ್, ಬಲಗೈನಲ್ಲಿ ಕೆಂಪು ಮಣಿಗಳಿಂದ ಕೂಡಿರುವ ದಾರ ಹಾಗೂ ಬಲ ಗಾಲಿನಲ್ಲಿ ಕಪ್ಪು ಬಿಳಿದಾವಿದೆ. ಶ್ರೀರಂಗಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.