ಪಟಾಕಿ ದುಬಾರಿ<bha>;</bha> ಕೊಳ್ಳುವವರು ದೂರ

KannadaprabhaNewsNetwork |  
Published : Nov 12, 2023, 01:01 AM IST
11ಕೆಎಂಎನ್‌ಡಿ-5ಮಂಡ್ಯದ ಡಾ.ರಾಜಕುಮಾರ್‌ ಬಡಾವಣೆಯಲ್ಲಿ ಪಟಾಕಿ ಮಾರಾಟಗಾರರು ಮಳಿಗೆಗಳನ್ನು ತೆರೆದು ವ್ಯಾಪಾರ ನಡೆಸುತ್ತಿರುವ ದೃಶ್ಯ. | Kannada Prabha

ಸಾರಾಂಶ

ಪಟಾಕಿ ದುಬಾರಿ; ಕೊಳ್ಳುವವರು ದೂರಕಳೆದ ವರ್ಷಕ್ಕಿಂತ ಶೇ.15 ರಿಂದ 20ರಷ್ಟು ದರ ಹೆಚ್ಚಳಪಟಾಕಿ ಮೇಲೆ ಮಕ್ಕಳಿಗಷ್ಟೇ ಆಸಕ್ತಿ, ಯುವಕರಲ್ಲಿ ಉತ್ಸಾಹವಿಲ್ಲ

- ಕಳೆದ ವರ್ಷಕ್ಕಿಂತ ಶೇ.15 ರಿಂದ 20ರಷ್ಟು ದರ ಹೆಚ್ಚಳ

- ಪಟಾಕಿ ಮೇಲೆ ಮಕ್ಕಳಿಗಷ್ಟೇ ಆಸಕ್ತಿ, ಯುವಕರಲ್ಲಿ ಉತ್ಸಾಹವಿಲ್ಲಕನ್ನಡಪ್ರಭ ವಾರ್ತೆ ಮಂಡ್ಯ

ದೀಪಾವಳಿ ಸಮಯದಲ್ಲಿ ಪಟಾಕಿ ಸಿಡಿಸುವವರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಪಟಾಕಿ ಬೆಲೆ ಮಾತ್ರ ದುಬಾರಿಯಾಗುತ್ತಲೇ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಪಟಾಕಿ ಬೆಲೆಯಲ್ಲಿ ಶೇ.15 ರಿಂದ 20ರಷ್ಟು ಬೆಲೆ ಹೆಚ್ಚಳವಾಗಿದೆ.

ಪಟಾಕಿ ಮೇಲೆ ಕೇವಲ ಮಕ್ಕಳಿಗಷ್ಟೇ ಆಸಕ್ತಿ ಇರುವುದು ಬಿಟ್ಟರೆ, ಯುವಕರು ಪಟಾಕಿ ಮೇಲಿನ ವ್ಯಾಮೋಹದಿಂದ ದೂರವೇ ಉಳಿದಿದ್ದಾರೆ. ಪಟಾಕಿ ಸಿಡಿಸುವ ಉತ್ಸಾಹವೂ ಇಲ್ಲ. ಇದರ ಪರಿಣಾಮ ಪಟಾಕಿ ನಿರೀಕ್ಷೆಯಂತೆ ಮಾರಾಟವಾಗದಿರುವುದು ಮಾರಾಟಗಾರರಲ್ಲಿ ಬೇಸರ ಮೂಡಿಸಿದೆ.

ಪ್ರತಿ ವರ್ಷ ಒಳಾಂಗಣ ಕ್ರೀಡಾಂಗಣದ ಪಕ್ಕದಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತಿತ್ತು. ಈ ಬಾರಿ ಜಾಗ ಬದಲಾವಣೆ ಮಾಡಲಾಗಿದ್ದು, ಡಾ.ರಾಜಕುಮಾರ್‌ ಬಡಾವಣೆಯ ವಸ್ತು ಪ್ರದರ್ಶನ ನಡೆಯುವ ಜಾಗದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಇದು ನಗರದ ಬಹುತೇಕ ಜನರಿಗೆ ಗೊತ್ತೇ ಇಲ್ಲ. ಹಲವಾರು ಮಂದಿ ಪಟಾಕಿ ನಿಷೇಧ ಮಾಡಿರಬಹುದೆಂಬ ಗೊಂದಲದಲ್ಲಿದ್ದಾರೆ. ಜಾಗದ ಬದಲಾವಣೆಯೂ ಪಟಾಕಿ ಮಾರಾಟದ ಮೇಲೆ ಕೊಂಚ ಪರಿಣಾಮ ಬೀರಿದೆ ಎನ್ನುವುದು ವ್ಯಾಪಾರಸ್ಥರು ಹೇಳುವ ಮಾತಾಗಿದೆ.

ಹೊಸ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಜನರು ಪಟಾಕಿ ಕೊಂಡೊಯ್ಯಲು ಚೆನ್ನಾಗಿದೆ. ನೀರು, ಮರಳು, ಅಗ್ನಿ ನಿರೋಧಕ ಸಿಲಂಡರ್‌ಗಳಿವೆ. ನಿರೀಕ್ಷಿತ ಮಟ್ಟದಲ್ಲಿ ಜನರು ಪಟಾಕಿ ಕೊಳ್ಳಲು ಬರುತ್ತಿಲ್ಲವೆಂಬುದು ವ್ಯಾಪಾರಸ್ಥರ ಅಳಲಾಗಿದೆ.

ಪಟಾಕಿ ಖರೀದಿಸಲು ಬರುವವರು ಮಕ್ಕಳಿಗೆ ಬೇಕಾದ ಸಣ್ಣ ಪುಟ್ಟ ಪಟಾಕಿಗಳನ್ನು ಖರೀದಿಸಿಕೊಂಡು ಹೋಗುತ್ತಿದ್ದಾರೆ. ದೊಡ್ಡ ದೊಡ್ಡ ಪಟಾಕಿಗಳನ್ನು ಕೊಳ್ಳುವುದಕ್ಕೆ ಯಾರೂ ಆಸಕ್ತಿಯನ್ನು ತೋರುತ್ತಿಲ್ಲ. ಮಕ್ಕಳ ಪಟಾಕಿಗಳಿಗೆ ಬೇಡಿಕೆ ಇದೆಯಾದರೂ ಅತಿ ಶಬ್ಧ ಬರುವ ಪಟಾಕಿಗಳಿಗೆ ಬೇಡಿಕೆ ಇಲ್ಲವಾಗಿದೆ.

ಕೆಲವರಷ್ಟೇ ಫ್ಯಾನ್ಸಿ ಪಟಾಕಿಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಅವುಗಳ ಬೆಲೆ ದುಬಾರಿಯಾಗಿರುವುದರಿಂದ ಹೆಚ್ಚಿನವರು ಅವುಗಳನ್ನು ಖರೀದಿಸುತ್ತಿಲ್ಲ. ಬಾಕ್ಸ್‌ಗಳು ಕನಿಷ್ಠ 250 ರು.ನಿಂದ 3 ಸಾವಿರ ರು.ಗಳವರೆಗೆ ಬೆಲೆ ನಿಗದಿಪಡಿಸಲಾಗಿದೆ.

ಪ್ರತಿ 12 ಕಿ.ಮೀ.ಗೊಂದರಂತೆ ಪಟಾಕಿ ಅಂಗಡಿಗಳ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಹಾಗಾಗಿ ಹೊರಗಿನ ತಾಲೂಕಿನವರು ಯಾರೂ ಪಟಾಕಿ ಕೊಳ್ಳುವುದಕ್ಕೆ ಜಿಲ್ಲಾ ಕೇಂದ್ರಕ್ಕೆ ಬರುವುದಿಲ್ಲ. ಆಯಾ ತಾಲೂಕುಗಳಲ್ಲಿಯೇ ಪಟಾಕಿ ಅಂಗಡಿಗಳು ಇರುವುದರಿಂದ ಅಲ್ಲೇ ಅವರು ಕೊಳ್ಳುತ್ತಾರೆ. ಮಂಡ್ಯ ನಗರ ಹಾಗೂ ಸುತ್ತಮುತ್ತಲ ಹಳ್ಳಿಯ ಜನರು ಬಂದು ಖರೀದಿಸಿದರಷ್ಟೇ ವ್ಯಾಪಾರ ಎಂದು ಮಾರಾಟಗಾರರು ಹೇಳುತ್ತಿದ್ದಾರೆ.ಜಿಲ್ಲಾಡಳಿತ ನೀಡಿರುವ ಹೊಸ ಜಾಗದಲ್ಲಿ 17 ಸ್ಟಾಲ್‌ಗಳಿವೆ. ಪಾರ್ಕಿಂಗ್ ವ್ಯವಸ್ಥೆ, ಜನರಿಗೆ ಕೊಂಡೊಯ್ಯಲು ಚೆನ್ನಾಗಿದೆ. ನೀರು, ಮರಳು, ಅಗ್ನಿ ನಿರೋಧಕ ಸಿಲಿಂಡರ್‌ಗಳಿವೆ. ಪಟಾಕಿ ಕೊಳ್ಳಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿಲ್ಲ. ಲಕ್ಷಾಂತರ ರು. ಬಂಡವಾಳ ಹೂಡಿದ್ದೇವೆ. ಭಾನುವಾರದಿಂದ ವ್ಯಾಪಾರ ನೋಡಬೇಕು.

-ಶೀತಲ್ ಕಾರ್ಯದರ್ಶಿ18 ವರ್ಷದಿಂದ ಕೊರೋನಾ ಮುಂಚೆ ಇದ್ದ ವ್ಯಾಪಾರ ಈಗ ಇಲ್ಲ. ಜಿಲ್ಲೆ ಮಾತ್ರ ತಾಲೂಕು ಮಟ್ಟದಲ್ಲೂ ಮಾರಾಟ ಮಾಡುತ್ತಾರೆ. ಮದ್ದೂರು ತಾಲೂಕಿನಲ್ಲಿ ಇರಲಿಲ್ಲ. ಕೆಸ್ತೂರು, ದೊಡ್ಡಿ, ಮಳವಳ್ಳಿ ಹೀಗೆ 12 ಕಿ.ಮೀ.ಗೆ ಪಟಾಕಿ ಮಾರಾಟ ಅಂಗಡಿಗಳಿವೆ. ಹಾಗಾಗಿ ಪಟಾಕಿ ಮಾರಾಟ ನಿರೀಕ್ಷಿಸಿದಂತಿಲ್ಲ.

- ನಾಗರಾಜು, ಪಟಾಕಿ ಮಾರಾಟಗಾರ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಔಷಧಿ ಪೂರೈಸದಷ್ಟು ಸರ್ಕಾರ ದಿವಾಳಿಯೇ ? ಸಿಟಿ ರವಿ ಪ್ರಶ್ನೆ
ಮಾದಕ ವಸ್ತುಗಳ ಸೇವನೆ ಬದುಕಿನ ವಿನಾಶಕ್ಕೆ ಮುನ್ನುಡಿ: ಡಾ.ಸುಹಾಸ್