ಮಕ್ಕಳ ಹೆತ್ತವರು, ಶಿಕ್ಷಕರಿಗೆ ಪ್ರಾಥಮಿಕ ಚಿಕಿತ್ಸೆ, ಜೀವರಕ್ಷಣಾ ತರಬೇತಿ

KannadaprabhaNewsNetwork |  
Published : Oct 07, 2025, 01:03 AM IST
ಜೀವರಕ್ಷಣಾ ಶಿಬಿರ ಉದ್ಘಾಟನೆ | Kannada Prabha

ಸಾರಾಂಶ

ಅರಿವು ವಿಶೇಷ ಮಕ್ಕಳ ತರಬೇತಿ ಕೇಂದ್ರ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮಂಗಳೂರು ಹಾಗೂ ಲಯನ್ಸ್ ನೇತ್ರಾವತಿ ಸಹಯೋಗದಲ್ಲಿ ವಿಶೇಷ ಮಕ್ಕಳ ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಜೀವ ರಕ್ಷಣಾ ತರಬೇತಿ ನಡೆಯಿತು.

ಮಂಗಳೂರು: ಶಕ್ತಿನಗರದಲ್ಲಿರುವ ಅರಿವು ವಿಶೇಷ ಮಕ್ಕಳ ತರಬೇತಿ ಕೇಂದ್ರ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮಂಗಳೂರು ಹಾಗೂ ಲಯನ್ಸ್ ನೇತ್ರಾವತಿ ಸಹಯೋಗದಲ್ಲಿ ವಿಶೇಷ ಮಕ್ಕಳ ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಜೀವ ರಕ್ಷಣಾ ತರಬೇತಿ ನಡೆಯಿತು.ಮಂಗಳೂರಿನ ಐಎಂಎ ಭವನದಲ್ಲಿ ನಡೆದ ಕಾರ್ಯಗಾರವನ್ನು ಐಎಂಎ ಅಧ್ಯಕ್ಷ ಡಾ. ಜೆಸ್ಸಿ ಮರಿಯಾ ಡಿಸೋಜಾ ಉದ್ಘಾಟಿಸಿ ಮಾತನಾಡಿ, ಈ ತರಬೇತಿ ವಿಶೇಷ ಮಕ್ಕಳ ಪೋಷಕರಲ್ಲಿ ಅರಿವು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು. ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಅರವಿಂದ ಕುಡ್ಪಿ ಮಾತನಾಡಿ, ಜೀವ ರಕ್ಷಣಾ ತರಬೇತಿ ಆಪತ್ಕಾಲದಲ್ಲಿ ಜೀವವನ್ನು ಉಳಿಸಲು ಸಹಾಯ ಆಗುತ್ತದೆ ಎಂದರು. ಅರಿವು ವಿಶೇಷ ಮಕ್ಕಳ ಸಂಸ್ಥೆಯ ಸ್ಥಾಪಕ ನಿರ್ದೇಶಕಿ ಪೂರ್ಣಿಮಾ ಭಟ್ ಕಾರ್ಯಕ್ರಮದ ಉದ್ದೇಶ ವಿವರಿಸಿದರು. ಅರಿವು ಟ್ರಸ್ಟ್ ಅಧ್ಯಕ್ಷ ಡಾ. ಸುಂದರ ಭಟ್ ಮಾತನಾಡಿ, ವಿಶೇಷ ಮಕ್ಕಳ ಹೆತ್ತವರಿಗೆ ಮಾರ್ಗದರ್ಶನ ನೀಡಿ ಮುಖ್ಯವಾಹಿನಿಗೆ ತರುವುದು ಅರಿವು ಸಂಸ್ಥೆಯ ಉದ್ದೇಶ ಎಂದರು. ಲಯನ್ಸ್ ಕ್ಯಾಬಿನೆಟ್ ಖಚಾoಚಿ ಬಾಲಕೃಷ್ಣ ಹೆಗ್ಡೆ, ಗಾಯತ್ರಿ ಅರವಿಂದ ರಾವ್, ಲಯನ್ಸ್ ನೇತ್ರವತಿ ಕ್ಲಬ್ ಅಧ್ಯಕ್ಷೆ ವಿನಯ ರಾವ್, ಡಿಸ್ಟ್ರಿಕ್ಟ್ ಅಪ್ಲಿಫ್ಟ್ ಆಫೀಸರ್ ಚಂದ್ರಕಲಾ ರಾವ್ ಅನುಭವ ಹಂಚಿಕೊಂಡರು.

ತರಬೇತಿಗೆ ಬೇಕಾದ ಪರಿಕರಗಳನ್ನು ಫಾ. ಮುಲ್ಲರ್ ಸಿಮುಲೇಷನ್ ಲ್ಯಾಬ್ ಒದಗಿಸಿ ಸಹಕರಿಸಿದರು. ಜೀವ ರಕ್ಷಣಾ ತರಬೇತಿಯನ್ನು ಡಾ.ಸುಧೀರ್ ಪ್ರಭು ನೇತೃತ್ವದಲ್ಲಿ ಡಾ. ಅರ್ಚನಾ ಭಟ್, ಡಾ. ಡೇನ್ ಚಾಂಡಿ, ಡಾ. ಪ್ರಗದೀಶ್ ರಾಜು ನಡೆಸಿಕೊಟ್ಟರು. ಅರಿವು ಸಂಸ್ಥೆಯ ಸಿಬ್ಬಂದಿ ನಯನ ಮೇಸ್ಟ ನಿರೂಪಿಸಿದರು. ತಿಲೋತ್ತಮ ಸ್ವಾಗತಿಸಿದರು. ಸಹನಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ