ಮಂಜುನಾಥ ಪೈ ಸ್ಮಾರಕ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಶಾಖೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಒಂದು ದಿನದ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ನಡೆಯಿತು.
ಕನ್ನಡಪ್ರಭ ವಾರ್ತೆ, ಉಡುಪಿ
ಪ್ರಥಮ ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇದರಿಂದ ಸಾವಿರಾರು ಅಮೂಲ್ಯ ಜೀವಗಳನ್ನು ರಕ್ಷಿಸಲು ಸಾಧ್ಯ. ಈ ದೃಷ್ಟಿಯಿಂದ ಪ್ರಥಮ ಚಿಕಿತ್ಸೆಯು ಶಾಲಾ ಕಾಲೇಜುಗಳಲ್ಲಿ ಪಠ್ಯ ಬೋಧನೆಯ ಭಾಗವಾಗಬೇಕು. ಈ ನಿಟ್ಟಿನಲ್ಲಿ ರೆಡ್ ಕ್ರಾಸ್ ಸಂಸ್ಥೆ ನಡೆಸುತ್ತಿರುವ ಪ್ರಥಮ ಚಿಕಿತ್ಸಾ ಕಾರ್ಯಾಗಾರಗಳು ಶ್ಲಾಘನಿಯ ಎಂದು ಡಾ. ಎ. ವಿ.ಬಾಳಿಗಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಟಿ. ಹೇಳಿದ್ದಾರೆ. ಮಂಜುನಾಥ ಪೈ ಸ್ಮಾರಕ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಶಾಖೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಒಂದು ದಿನದ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ರೆಡ್ ಕ್ರಾಸ್ ಸಂಸ್ಥೆಯು ವಿವಿಧ ಕೈಗಾರಿಕೆಗಳು ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಪ್ರಥಮ ಚಿಕಿತ್ಸೆ ತರಬೇತಿಯ ಬಗ್ಗೆ ತಿಳಿಸಿದರು. ವಿಕಲಚೇತನರ ಪುನರ್ವಸತಿ ಕೇಂದ್ರದ ಅಡಿಯಾಲಜಿಸ್ಟ್ ನೆಲಿಶಾ ಮೆರಿಲ್ ಜತ್ತನ್ನ ಇದ್ದರು.
ವಿದ್ಯಾರ್ಥಿನಿಯರ ರೆಡ್ ಕ್ರಾಸ್ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾಲೇಜಿನ ರೆಡ್ ಕ್ರಾಸ್ ಘಟಕದ ನಾಯಕಿ ನವ್ಯಾ ಹೆಗ್ಡೆ ಸ್ವಾಗತಿಸಿದರು. ದಿವ್ಯಾ ದೇವಾಡಿಗ ವಂದಿಸಿದರು. ರಚನಾ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.