ಕನ್ನಡಪ್ರಭ ವಾರ್ತೆ ತಾಳಿಕೋಟೆ
ಈ ಸಮಯದಲ್ಲಿ ಆರ್.ಎಲ್.ಕೊಪ್ಪದ ಮಾತನಾಡಿ, ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಜಾನಪದ ಸಾಹಿತ್ಯ ಬಹಳ ಮುಖ್ಯಪಾತ್ರ ವಹಿಸಿದ್ದಾಗಿದೆ. ತಾಳಿಕೋಟೆ ಐತಿಹಾಸಿಕ ನಗರಿಯಲ್ಲಿ ತಾಲೂಕು ಕೇಂದ್ರವಾದ ಬಳಿಕ ಮೊದಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನದ ಸವಿಯನ್ನು ಎಲ್ಲರೂ ಭಾಗವಹಿಸಲು ರಥವನ್ನು ಸಿದ್ಧಪಡಿಸಿ ಚಾಲನೆ ನೀಡಲಾಗಿದೆ. ಕಾರಣ ಎಲ್ಲ ಕನ್ನಡಾಭಿಮಾನಿಗಳು ಅ.೧ ರಂದು ನಡೆಯುವ ಐತಿಹಾಸಿಕ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಬೇಕು ಎಂದು ಕೋರಿದರು.ಈ ಸಮಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಭುಗೌಡ ಮದರಕಲ್ಲ, ಮಾಸುಮಸಾಬ್ ಕೇಂಭಾವಿ, ಆರ್.ವಿ.ಜಾಲವಾದಿ, ಜೈಭೀಮ ಮುತ್ತಗಿ, ಆನಂದ ಮದರಕಲ್ಲ, ಘನಶಾಮ ಚವ್ಹಾಣ, ಬಿ.ಆರ್.ಪೋಲೀಸ್ಪಾಟೀಲ, ವಿ.ಬಿ.ಸಜ್ಜನ, ಡೋಣಿ, ಕಟ್ಟಿಮನಿ ಮೊದಲಾದವರು ಉಪಸ್ಥಿತರಿದ್ದರು.