ಪಿಲಿಕುಳ ಕೆರೆಯಲ್ಲಿ ಮತ್ಸ್ಯೋತ್ಸವ ಸಂಭ್ರಮ: ಮೀನು ಹಿಡಿದು ಸ್ಥಳದಲ್ಲೇ ಖಾದ್ಯ ತಯಾರಿ

KannadaprabhaNewsNetwork |  
Published : Jul 29, 2025, 01:15 AM ISTUpdated : Jul 29, 2025, 01:33 AM IST
ಪಿಲಿಕುಳ ನಿಸರ್ಗಧಾಮದಲ್ಲಿ ಹಿಡಿದ ಮೀನುಗಳನ್ನು ಮಾರಾಟ ಮಾಡುತ್ತಿರುವುದು. | Kannada Prabha

ಸಾರಾಂಶ

ಪಿಲಿಕುಳದಲ್ಲಿ ಭಾನುವಾರ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ಮೀನು ಹಾಗೂ ಮೌಲ್ಯವರ್ಧಿತ ಮೀನು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಏರ್ಪಡಿಸಲಾಗಿತ್ತು. ಸ್ಥಳದಲ್ಲೇ ಮೀನುಗಳ ವಿವಿಧ ಖಾದ್ಯಗಳನ್ನು ತಯಾರಿಸಿ ಮಾರಾಟ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರುಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಪಿಲಿಕುಳ ನಿಸರ್ಗಧಾಮದ ವಿಶಾಲವಾದ ಕೆರೆಯಲ್ಲಿ ಭಾನುವಾರ ವಾರ್ಷಿಕ ಮತ್ಸ್ಯೋತ್ಸವ- ಮೀನು ಹಿಡಿಯುವ ಸಡಗರ. ಅನುಭವಿ ಮೀನುಗಾರರ ಮೂಲಕ ಭಾರೀ ಪ್ರಮಾಣದ ಮೀನುಗಳನ್ನು ಹಿಡಿದು ಸ್ಥಳದಲ್ಲೇ ಮಾರಾಟ ವ್ಯವಸ್ಥೆ ಕಲ್ಪಿಸಲಾಗಿತ್ತು.

ರೋಹು, ಕಾಟ್ಲಾ, ತಿಲೇಪಿಯಾ ಮುಂತಾದ ಬೃಹತ್‌ ಗಾತ್ರದ ಮೀನುಗಳನ್ನು ಹಿಡಿಯಲಾಯಿತು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ಮೀನು ಹಾಗೂ ಮೌಲ್ಯವರ್ಧಿತ ಮೀನು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಏರ್ಪಡಿಸಲಾಗಿತ್ತು. ಸ್ಥಳದಲ್ಲೇ ಮೀನುಗಳ ವಿವಿಧ ಖಾದ್ಯಗಳನ್ನು ತಯಾರಿಸಿ ಮಾರಾಟ ಮಾಡಲಾಯಿತು. ಮೀನು ಪ್ರಿಯರಿಗೆ ಇದು ಹಬ್ಬದ ವಾತಾವರಣ ಸೃಷ್ಟಿಸಿತ್ತು.ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಉತ್ಸವ ಉದ್ಘಾಟಿಸಿದರು. ಇದೇ ಸಂದರ್ಭ ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಿಂದ 20 ಸಾವಿರಕ್ಕೂ ಅಧಿಕ ಮೀನು ಮರಿಗಳನ್ನು ಕೆರೆಗೆ ಬಿಡಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 1,200 ಕೆಜಿ ಮೀನುಗಳನ್ನು ಹಿಡಿದು ಮಾರಾಟ ಮಾಡಲಾಯಿತು.

ಉತ್ತಮ ಪ್ರತಿಕ್ರಿಯೆ:

ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದ್ದು, ಸಾರ್ವಜನಿಕ ಪ್ರತಿಕ್ರಿಯೆ ಉತ್ತಮವಾಗಿತ್ತು. ಸುಮಾರು 500ಕ್ಕೂ ಅಧಿಕ ಮಂದಿ ಮತ್ಸ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಭಾರ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದರು.

ಹಿಂದಿನ ವರ್ಷಗಳಲ್ಲಿ ಕೆರೆಯಲ್ಲಿ ಹಿಡಿದ ಮೀನುಗಳಲ್ಲಿ ಕೆಲವು ಮಾರಾಟವಾಗದೆ ಉಳಿಯುತ್ತಿತ್ತು. ಈ ಬಾರಿ ಜನರು ಮೀನು ಖರೀದಿಸಲು ಸರತಿ ಸಾಲಿನಲ್ಲಿ ನಿಂತಿದ್ದರು. ಕೆಲವು ಮೀನುಗಳು 6ರಿಂದ 7 ಕೆಜಿ ತೂಕವಿದ್ದವು. ರೋಹು ಮತ್ತು ಕ್ಯಾಟ್ಲಾ ಕೆಜಿಗೆ 160 ರು.ಗೆ ಮಾರಾಟವಾದರೆ, ತಿಲೇಪಿಯಾ ಕೆಜಿಗೆ 100 ರು.ಗೆ ಮಾರಾಟವಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ